ಮಾ.8: ಬಿವಿಟಿಯಲ್ಲಿ ಮಹಿಳಾ ದಿನಾಚರಣೆ

Update: 2021-03-04 14:43 GMT

ಮಣಿಪಾಲ, ಮಾ.4: ಮಣಿಪಾಲದ ಭಾರತೀಯ ವಿಕಾಸ ಟ್ರಸ್ಟಿನಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ‘ಮಹಿಳೆ ಮತ್ತು ನಾಯಕತ್ವ’ ಎಂಬ ವಿಷಯದಲ್ಲಿ ವಿಚಾರಗೋಷ್ಠಿಯೊಂದು ಮಾ.8ರಂದು ಬೆಳಗ್ಗೆ 10:00ಕ್ಕೆ ಮಣಿಪಾಲ ಶಿವಳ್ಳಿಯ ಭಾರತೀಯ ವಿಕಾಸ ಟ್ರಸ್ಟ್ ಸಭಾಂಗಣದಲ್ಲಿ ನಡೆಯಲಿದೆ.

ಮಹಿಳಾ ದಿನಾಚರಣೆ ಮತ್ತು ವಿಚಾರಗೋಷ್ಠಿಯನ್ನು ಖ್ಯಾತ ಲೇಖಕಿ, ಹಾಸ್ಯ ಬರಹಗಾರ್ತಿ ಭುವನೇಶ್ವರಿ ಹೆಗಡೆ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆ ಯನ್ನು ಉಡುಪಿ ಜಿಪಂ ಉಪಾಧ್ಯಕ್ಷೆ ಶೀಲಾ ಶೆಟ್ಟಿ ವಹಿಸಲಿದ್ದು, ವೈಕುಂಠ ಬಾಳಿಗಾ ಕಾನೂನು ಮಹಾ ವಿದ್ಯಾಲಯದ ಪ್ರಾಂಶುಪಾಲೆ ಡಾ. ನಿರ್ಮಲಾ ಕುಮಾರಿ, ನಬಾರ್ಡ್ ಸಂಸ್ಥೆಯ ಡಿಡಿಎಂ ಸಂಗೀತಾ ಕರ್ತಾ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ವಿಚಾರಗೋಷ್ಠಿಯಲ್ಲಿ ವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ಪ್ರಾಂಶುಪಾಲೆ ಡಾ. ನಿರ್ಮಲಾ ಕುಮಾರಿ, ಮಹಿಳಾ ಮತ್ತು ಮಕ್ಕಳ ಇಲಾಖೆಯ ಸಿಡಿಪಿಒ ವೀಣಾ ವಿವೇಕಾನಂದ, ಉಡುಪಿ ತಾಲೂಕು ಅರೋಗ್ಯಾಧಿಕಾರಿ ಡಾ. ನಾಗರತ್ನ ವಿಚಾರಮಂಡನೆ ಮಾಡಲಿದ್ದಾರೆ.

ಭಾರತೀಯ ವಿಕಾಸ ಟ್ರಸ್ಟಿನ ಮುಖ್ಯ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀ ಬಾಯಿ ಮತ್ತು ಅಧಿಕಾರಿ ಭಾರತಿ ಹೆಗಡೆ, ಪ್ರತಿಮಾ ಕಾರ್ಯಕ್ರಮ ಸಂಯೋಜನೆ ನಡೆಸಲಿದ್ದಾರೆ ಎಂದು ಭಾರತೀಯ ವಿಕಾಸ ಟ್ರಸ್ಟ್ನ ಹಿರಿಯ ಸಲಹೆಗಾರ ಶ್ರೀಕಾಂತ ಹೊಳ್ಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News