ಭಟ್ಕಳ : ಬೆಳಕೆ ಪ್ರೌಢಶಾಲೆಯಲ್ಲಿ "ನನಗಾಗಲ್ಲ ನಿಮಗಾಗಿ" ಕಾರ್ಯಕ್ರಮ

Update: 2021-03-04 16:45 GMT

ಭಟ್ಕಳ : ಬೆಳಕೆ ಪ್ರೌಢಶಾಲೆಯಲ್ಲಿ "ನನಗಾಗಲ್ಲ ನಿಮಗಾಗಿ" ಕಾರ್ಯಕ್ರಮ ನಡೆಯಿತು. 

ರಾಷ್ಟ್ರೀಯ ಸೇವಾ ಯೋಜನೆಯಡಿಯಲ್ಲಿ ಎರ್ಪಡಿಸಲಾಗಿದ್ದ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಶಾಂತಿ ಸುಕ್ರನಮನೆ ಉದ್ಘಾಟಿಸಿ ಮಾತನಾಡುತ್ತಾ ಇದೊಂದು ಉತ್ತಮ ಕಾರ್ಯಕ್ರಮವಾಗಿದೆ ಎಂದರು.  ಬೆಳಕೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಸರಕಾರಿ ಪ್ರೌಢ ಶಾಲೆಗೆ ತಮ್ಮ ಗ್ರಾಮ ಪಂಚಾಯತ್ ವತಿಯಿಂದ ಎಲ್ಲಾ ರೀತಿಯ ಸಹಕಾರವನ್ನು ನೀಡುವುದಾಗಿ ಭರವಸೆಯನ್ನು ಸಹ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು  ಮುಖ್ಯ ಶಿಕ್ಷಕಿ ಶಾಲಿನಿ ಗೊವಿಂದ ನಾಯಕ ವಹಿಸಿದ್ದರು. 

ಸಂಪನ್ಮೂಲ ವ್ಯಕ್ತಿಯಾದ ಗ್ರಾಮ ಪಂಚಾಯತ್ ಅಭಿವೃದ್ದಿ ಅಧಿಕಾರಿ ಚಂದ್ರಶೇಖರ್ ಅವರು ಗ್ರಾಮ ಪಂಚಾಯತ್ ಕಾರ್ಯವ್ಯಾಪ್ತಿಯ ಬಗ್ಗೆ  ಮಾಹಿತಿ ನೀಡಿದರು.

ಎನ್ನೆಸ್ಸೆಸ್ ಕಾರ್ಯಕ್ರಮಾಧಿಕಾರಿ  ಪ್ರಕಾಶ ಶಿರಾಲಿ ಸ್ವಾಗತಿಸಿ, ಪ್ರಸ್ತಾವಿಕ ಮಾತನಾಡಿದರು. ಚಂದ್ರ ಶೇಖರ ಬೈಲೂರು ನಿರೂಪಿಸಿದರು.  ರಾಜು ಬಾಂದೆಕರ ವಂದಿಸಿದರು. ಕಾರ್ಯಕ್ರಮದಲ್ಲಿ 100 ಎನ್.ಎಸ್.ಎಸ್. ವಿದ್ಯಾರ್ಥಿಗಳು ಭಾಗವಹಿಸಿದ್ದು ಕಾರ್ಯಕ್ರಮದ ನಂತರ ಸ್ವಚ್ಛತಾ ಅಭಿಯಾನ ನಡೆಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News