ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ ಸಿಎಂ ಇಬ್ರಾಹಿಂ

Update: 2021-03-05 06:57 GMT

ಬೆಂಗಳೂರು, ಮಾ.5: ಕಾಂಗ್ರೆಸ್ ಪಕ್ಷ ಹಾಗೂ ಕೆಲ ನಾಯಕರೊಂದಿಗೆ ಮುನಿಸಿಕೊಂಡಿದ್ದ ಕಾಂಗ್ರೆಸ್ ನಾಯಕ ಸಿ.ಎಂ ಇಬ್ರಾಹಿಂ ಅವರು ಇಂದು ಸಿದ್ದರಾಮಯ್ಯ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದಾರೆ.

ಶುಕ್ರವಾರ ಸಿಎಂ ಇಬ್ರಾಹಿಂ ಅವರು ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿ ಮಾತುಕತೆ ಮಾಡಿದರು. ಈ ಸಂಬಂಧ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ‘ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಸಿ.ಎಂ. ಇಬ್ರಾಹಿಂ ಅವರು ಇಂದು ನನ್ನ ನಿವಾಸಕ್ಕೆ ಆಗಮಿಸಿ, ಮಾತುಕತೆ ನಡೆಸಿದರು’’ ಎಂದು ತಿಳಿಸಿದ್ದಾರೆ.

ಪಕ್ಷದಲ್ಲಿ ಕೆಲ ನಾಯಕರ ನಡೆಯ ಬಗ್ಗೆ ಸಿಎಂ ಇಬ್ರಾಹಿಂ ಅಸಮಧಾನಗೊಂಡಿದ್ದರು ಎನ್ನಲಾಗಿದ್ದು, ಈ ಸಂಬಂಧ ಬಹಿರಂಗ ಹೇಳಿಕೆಗಳನ್ನೂ ಅವರ ನೀಡಿದ್ದರು. ಅಲ್ಲದೆ ಅವರು ಮತ್ತೆ ಜೆಡಿಎಸ್‌ಗೆ ಸೇರ್ಪಡೆ ಆಗುತ್ತಾರೆ ಎಂದು ಹೇಳಲಾಗುತ್ತಿತ್ತು. ಇದಕ್ಕೆ ಪೂರಕ ಎಂಬಂತೆ ಅವರು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News