ಯಾರು ಏನೇ ಬೊಬ್ಬೆ ಹಾಕಿದರೂ ಆರೆಸ್ಸೆಸನ್ನು ಏನೂ ಮಾಡಲು ಸಾಧ್ಯವಿಲ್ಲ: ಸಿಎಂ ಯಡಿಯೂರಪ್ಪ

Update: 2021-03-05 13:09 GMT

ಬೆಂಗಳೂರು, ಮಾ. 5: ಯಾರು ಏನೇ ಬೊಬ್ಬೆ ಹಾಕಿದರೂ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್)ವನ್ನು ಏನೂ ಮಾಡಲು ಸಾಧ್ಯವಿಲ್ಲ. ಟೀಕೆ ಮಾಡಿದಷ್ಟು ಆರೆಸ್ಸೆಸ್ ಬಲಿಷ್ಠವಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಶುಕ್ರವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾನು ಆರೆಸ್ಸೆಸ್ ಹಿನ್ನೆಲೆಯಿಂದಲೇ ಮುಖ್ಯಮಂತ್ರಿ ಸ್ಥಾನಕ್ಕೆ ಬಂದಿದ್ದು, ಆ ತತ್ವ-ಸಿದ್ಧಾಂತ ನಂಬಿ ಅಪಾರವಾಗಿ ಕಲಿತಿದ್ದೇನೆ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮೊದಲು ತಮ್ಮ ಹಿನ್ನೆಲೆಯನ್ನು ನೋಡಿಕೊಳ್ಳಬೇಕು ಎಂದು ಇದೇ ವೇಳೆ ಟೀಕಿಸಿದರು.

ಸಿದ್ದರಾಮಯ್ಯ ಆರೆಸ್ಸೆಸ್ ವಿರುದ್ಧ ಮಾತನಾಡುವುದನ್ನು ಮೊದಲು ನಿಲ್ಲಿಸಬೇಕು. ಬಾಯಿಗೆ ಬಂದ ಹಾಗೆ ಮಾತನಾಡುವುದು ವಿಪಕ್ಷ ನಾಯಕರಿಗೆ ಶೋಭೆಯಲ್ಲ. ಇಡೀ ದೇಶವೇ ಪ್ರಧಾನಿ ಮೋದಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವಾಗ ಮೋದಿ ಗಡ್ಡ ಬಿಟ್ಟಿದ್ದಾರೆ ಎಂದು ಟೀಕಿಸುವುದು ಸರಿಯಲ್ಲ ಎಂದು ಯಡಿಯೂರಪ್ಪ ಆಕ್ಷೇಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News