ಜ್ಯುವೆಲ್ಲಗೆ ನುಗ್ಗಿ ಚಿನ್ನ ಎಗರಿಸಿದ ವ್ಯಕ್ತಿಯ ಬಂಧನ

Update: 2021-03-05 13:44 GMT

ಮಂಗಳೂರು, ಫೆ.5: ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಶಾಪ್‌ನಿಂದ ಚಿನ್ನ ಎಗರಿಸಿ ಪರಾರಿಯಾಗುತ್ತಿದ್ದ ಖದೀಮನನ್ನು ಜ್ಯುವೆಲ್ಲರಿ ಮಾಲಕರೇ ಹಿಡಿದ ಘಟನೆ ನಗರದ ಕಾರ್‌ಸ್ಟ್ರೀಟ್ ನಲ್ಲಿರುವ ಜ್ಯುವೆಲ್ಲರಿ ಶಾಪ್ ಒಂದರಲ್ಲಿ ನಡೆದಿದೆ.

ಅರುಣ್ ಜಿ. ಶೇಟ್ ಎಂಬವರ ಅಂಗಡಿಗೆ ನುಗ್ಗಿದ ಆಗಂತುಕ ಚಿನ್ನ ಖರೀದಿಸುವ ನಾಟಕವಾಡಿ ಚಿನ್ನದ ಉಂಗುರವನ್ನು ಬಾಯೊಳಗೆ ಹಾಕಿ ಪರಾರಿಯಾಗಿದ್ದಾನೆ. ಇದನ್ನು ಗಮನಿಸಿದ ಅರುಣ್ ಶೇಟ್ ಆತನನ್ನು ಬೆನ್ನಟ್ಟಿ ಸಾರ್ವಜನಿಕರ ಸಹಾಯದಿಂದ ಹಿಡಿದಿದ್ದಾರೆ. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿಯೂ ಸೆರೆಯಾಗಿದೆ.

ಬಳಿಕ ಈ ಬಗ್ಗೆ ಪೊಲೀಸ್ ದೂರು ನೀಡಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಆರೋಪಿಯನ್ನು ಬಂಧಿಸಿದ್ದಾರೆ. ಈ ಬಗ್ಗೆ ಬಂದರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News