ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ

Update: 2021-03-05 16:27 GMT

ಕಾರ್ಕಳ, ಮಾ.5: ಮಾಳ ಗ್ರಾಮದ ಮಲ್ಲಾರ್ ಪರಿಬೆಟ್ಟು ಎಂಬಲ್ಲಿ ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಪರಿಬೆಟ್ಟು ನಿವಾಸಿ ಸುಂದರ ಕೋಟ್ಯಾನ್ ಎಂಬವರ ಮಗ ಮಿತ್ರಾಜ್(35) ಎಂದು ಗುರುತಿಸಲಾಗಿದೆ. ಇವರು ಮಾನಸಿಕ ಖಾಯಿಲೆ ಮತ್ತು ವಿಪರೀತ ಕುಡಿತದ ಚಟದಿಂದ ಮನನೊಂದು ಮನೆಯಲ್ಲಿ ಫೆ.27ರಂದು ಮೈಮೇಲೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಗಂಭೀರವಾಗಿ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು, ಮಾ.4ರಂದು ಸಂಜೆ ಚಿಕಿತ್ಸೆ ಫಲಕಾರಿ ಯಾಗದೆ ಮೃತಪಟ್ಟರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News