ರೈಲು ಢಿಕ್ಕಿಯಾಗಿ ಯುವಕ ಮೃತ್ಯು

Update: 2021-03-06 16:05 GMT

ಪಡುಬಿದ್ರಿ: ರೈಲ್ವೇ ಹಳಿ ಬದಿ ನಡೆದುಕೊಂಡು ಹೋಗುತಿದ್ದ ವ್ಯಕ್ತಿಯೋರ್ವರಿಗೆ ರೈಲು ಢಿಕ್ಕಿ ಹೊಡೆದು ಸಾವನ್ನಪ್ಪಿದ ಘಟನೆ ಶನಿವಾರ ಮಧ್ಯಾಹ್ನ ಪಲಿಮಾರು ರೈಲ್ವೇ ಗೇಟ್ ಬಳಿ ನಡೆದಿದೆ.

ಮೃತರನ್ನು ಕವತ್ತಾರು ನಿವಾಸಿ ನಾಗೇಶ್ ಪೂಜಾರಿ (39) ಎಂದು ಗುರುತಿಸಲಾಗಿದೆ. ಪತ್ನಿ ಸಾವನ್ನಪ್ಪಿದ ಬಳಿಕ ಮಾನಸಿಕ ಅಸ್ವಸ್ಥರಾಗಿರುವ ನಾಗೇಶ್ ಪೂಜಾರಿ ಮನೆಗೆ ಹೋಗುತ್ತಿರಲಿಲ್ಲ. ಪಲಿಮಾರು ಹೊಯಿಗೆ ಮಲ್ಲಮಾರ್ ಎಂಬಲ್ಲಿ ಶನಿವಾರ ಮಧ್ಯಾಹ್ನದ ವೇಳೆ ರೈಲ್ವೇ ಹಳಿಯ ಬದಿಯಲ್ಲಿ ನಡೆದು ಹೋಗುತಿದ್ದಾಗ ಅವರಿಗೆ ರೈಲೊಂದು ಢಿಕ್ಕಿಯಾಗಿತ್ತು. ತೀವ್ರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣವು ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News