​ಪ್ರತ್ಯೇಕ ಪ್ರಕರಣ: ಇಬ್ಬರ ಆತ್ಮಹತ್ಯೆ

Update: 2021-03-06 16:36 GMT

ಬ್ರಹ್ಮಾವರ, ಮಾ.6: ವಯೋ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ನೀಲಾವರ ಗ್ರಾಮದ ಎಳ್ಳಂಪಳ್ಳಿ ನಿವಾಸಿ ವೆಂಕಟರಮಣ ಅಡಿಗ(75) ಎಂಬವರು ಮಾನಸಿಕ ಖಿನ್ನತೆಗೆ ಒಳಗಾಗಿ ಮಾ.1ರಂದು ಸಂಜೆಯಿಂದ ಮಾ.5ರ ಸಂಜೆಯ ಮದ್ಯಾವಧಿಯಲ್ಲಿ ಮನೆಯ ಎದುರಿನ ಬಾವಿಯ ಕಬ್ಬಿಣದ ಪೋಲಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮುಂಡ್ಕೂರು ಗ್ರಾಮದ ಸಚ್ಚರಿಪೇಟೆ ಚಾವಂಡಿಗುಡ್ಡೆಯ ಫ್ಲೋರಿನ್ ಪಿಂಟೊ(52) ಎಂಬವರು ಮಾ.5 ರಂದು ರಾತ್ರಿ ವೇಳೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News