ಯಲ್ಲಾಪುರ: ಗುಡ್ಡ ಕುಸಿತದಿಂದ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಮೃತ್ಯು

Update: 2021-03-08 13:55 GMT

ಯಲ್ಲಾಪುರ: ತೋಟದ ಬಳಿ ಮಣ್ಣಿನ ಕೆಲಸ ಮಾಡುತ್ತಿದ್ದ ಸಂದರ್ಭ ಗುಡ್ಡ ಕುಸಿದ ಪರಿಣಾಮ ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಇಡಗುಂದಿ ಬಳಿ ನಡೆದಿದೆ.

ಮೃತರನ್ನು ಯಲ್ಲಾಪುರ ತಾಲೂಕಿನ ಕಿರವತ್ತಿ ಸಮೀಪದ ಗೌಳಿವಾಡದ ನಿವಾಸಿಗಳಾದ ಭಾಗ್ಯಶ್ರೀ ಎಡಗೆ (21), ಲಕ್ಷ್ಮೀ ಡೋಯಿಪಡೆ (38), ಸಂತೋಷ್ ಡೋಯಿಪಡೆ (18) ಹಾಗೂ ಮಾಳು ಡೋಯಿಪಡೆ (21) ಎಂದು ಗುರುತಿಸಲಾಗಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಯಲ್ಲಾಪುರ ತಾಲೂಕಿನ ಇಡಗುಂದಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂತೇಬೈಲ್ ನ ಮಂಜುನಾಥ ಭಟ್ಟ ಎಂಬವರ ಮಾಲಕತ್ವದ ತೋಟದ ಕೆಲಸಕ್ಕೆಂದು ಏಳು ಮಂದಿ ಕಾರ್ಮಿಕರು ತೆರಳಿದ್ದರು. ತೋಟಕ್ಕೆ ಮಣ್ಣು ಹಾಕುತ್ತಿದ್ದ ವೇಳೆ ಗುಡ್ಡ ಕುಸಿದು ಕಾರ್ಮಿಕರ ಮೇಲೆ ಮಣ್ಣು ಬಿದಿದೆ.

ಈ ಬಗ್ಗೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News