ಪೇರಡ್ಕ ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್, ಸರ್ವಧರ್ಮ ಸಮ್ಮೆಳನ

Update: 2021-03-08 17:18 GMT

ಪೇರಡ್ಕ ಮುಹಿಯದ್ದೀನ್ ಜುಮ್ಮಾ ಮಸೀದಿಯ ವಲಿಯುಲ್ಲಾಹಿ ದರ್ಗಾ ಶರೀಫ್ ಉರೂಸ್ ಕಾರ್ಯಕ್ರಮ ಹಾಗೂ ಸರ್ವಧರ್ಮ ಸಮ್ಮೇಳನ ಪೇರಡ್ಕ ತೆಕ್ಕಿಲ್ ಮಹಮ್ಮದ್ ಹಾಜಿ ವೇದಿಕೆಯಲ್ಲಿ ನಡೆಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಕೆಪಿಸಿಸಿ ಮಾಜಿ ಕಾರ್ಯದರ್ಶಿ ಟಿ.ಎಂ.ಶಹೀದ್ ತೆಕ್ಕಿಲ್ ವಹಿಸಿದ್ದರು. ಕೆ.ವಿ.ಜಿ ಆಯುರ್ವೇದಿಕ್ ಕಾಲೇಜು ಪ್ರಾಂಶುಪಾಲ ಡಾ.ಲೀಲಾಧರ ಡಿ.ವಿ. ಕಾರ್ಯಕ್ರಮ ಉದ್ಘಾಟಿಸಿದರು.

ಪೇರಡ್ಕ ಜುಮ್ಮಾ ಮಸೀದಿ ಖತೀಬ್ ಸುಹೇಲ್ ದಾರಿಮಿ ದುವಾ ನೆರವೇರಿಸಿದರು. ಕರ್ನಾಟಕ ರಾಜ್ಯ ಎಸ್‍ಕೆಎಸ್‍ಎಸ್.ಎಫ್ ರಾಜ್ಯ ಅಧ್ಯಕ್ಷ ಅನೀಸ್ ಕೌಸರಿ, ಸಿಐಟಿಯು ಸುಳ್ಯ ತಾಲೂಕು ಅಧ್ಯಕ್ಷ ಕೆ.ಪಿ.ಜಾನಿ ಕಲ್ಲುಗುಂಡಿ, ಮಾತನಾಡಿದರು. ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆಯ್ಕೆಯಾದ ಜಿ.ಕೆ ಹಮೀದ್ ಮತ್ತು ಪೊಲೀಸ್ ಉಪನಿರೀಕ್ಷಕ ಅಜ್ಮಲ್ ಇಬ್ರಾಹಿಂ ರವರನ್ನು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಮುಖ್ಯ ಆತಿಥಿಗಳಾಗಿ ಅಬ್ದುಲ್ಲಾ ಕುಂಞ ಸಂಕೇಶ್, ಝಾಕರಿಯಾ ದಾರಿಮಿ, ಪೇರಡ್ಕ ಮಸೀದಿ ಅಧ್ಯಕ್ಷ ಅಲಿ ಹಾಜಿ,ಅಬ್ದುಲ್ ಖಾದರ್ ಹಾಜಿ ಅಮ್ಚಿನಡ್ಕ, ದ.ಕ.ಜಿಲ್ಲಾ ಎಸ್ ಡಿಪಿಐ ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ, ಸಂಪಾಜೆ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ ಕೊಯಿಂಗಾಜೆ, ಸುಳ್ಯ ವರ್ತಕರ ಸಂಘದ ಅಧ್ಯಕ್ಷ ಪಿ.ಬಿ.ಸುಧಾಕರ ರೈ, ಟಿ.ಎಮ್.ಬಾಬ ಹಾಜಿ ತೆಕ್ಕಿಲ್,ಪೊಲೀಸ್ ಉಪನಿರೀಕ್ಷಕ ಅಜ್ಮಲ್ ಇಬ್ರಾಹಿಂ ಸಂಪಾಜೆ,ಅಲ್ಪಸಂಖ್ಯಾತ ಘಟಕದ ರಾಜ್ಯ ಸಂಯೋಜಕ ತಾಜ್ ಮಹಮ್ಮದ್ ಸಂಪಾಜೆ, ಸಂಪಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಜಿ.ಕೆ.ಹಮೀದ್,ಸಂಪಾಜೆ ವರ್ತಕರ ಸಂಘದ ಅಧ್ಯಕ್ಷ ಯು.ಬಿ.ಚಕ್ರಪಾಣಿ, ಕೊಡಗು ಸಾಮಾಜಿಕ ಜಾಲತಾಣ ಮುಖ್ಯಸ್ಥ ಸೂರಜ್ ಹೊಸೂರು, ಸುಳ್ಯ ಪತ್ರಕರ್ತರ ಸಂಘದ ಅಧ್ಯಕ್ಷ ಕೃಷ್ಣ ಬೆಟ್ಟ, ಅಬ್ದುಲ್ ಕಲಾಂ ಸುಳ್ಯ ,ಲತೀಫ್ ಹರ್ಲಡ್ಕ,ಹನೀಫ್ ಎಸ್.ಕೆ.ಜಗದೀಶ್ ಪೆರಂಗೋಡಿ, ರಝಾಕ್ ಹಾಜಿ ಮೊಟ್ಟಂಗಾರ್, ಬದ್ರುದ್ದೀನ್ ಪಠೇಲ್, ಎಮ್.ಆರ್.ಡಿ.ಎ.ಅಧ್ಯಕ್ಷ ಜಾಕೀರ್ ಹುಸೈನ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಕಾದರ್ ಮೊಟ್ಟಂಗಾರ್ ಸ್ವಾಗತಿಸಿ, ಅಶ್ರಫ್ ಟರ್ಲಿ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News