ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ನಿವಾಸದ ತಡೆಗೋಡೆಗೆ ಬಸ್‍ ಢಿಕ್ಕಿ

Update: 2021-03-09 15:50 GMT

ಬೆಂಗಳೂರು, ಮಾ.9: ಇಲ್ಲಿನ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಅವರ ನಿವಾಸದ ತಡೆಗೋಡೆಗೆ ಬಸ್‍ವೊಂದು ನಿಯಂತ್ರಣ ತಪ್ಪಿ ಢಿಕ್ಕಿ ಹೊಡೆದಿದೆ.

ಮಂಗಳವಾರ ಈ ಘಟನೆ ನಡೆದಿದ್ದು, ಹಿಂದೂಪುರ-ಬೆಂಗಳೂರು ಮಾರ್ಗದಲ್ಲಿ ಓಡಾಡುವ ಎಸ್‍ಎನ್‍ಬಸ್ ಖಾಸಗಿ ಸಂಸ್ಥೆಯ ಬಸ್ ಗುದ್ದಿದ ರಭಸಕ್ಕೆ ಡಿಜಿಪಿ ನಿವಾಸದ ತಡೆಗೋಡೆಗೆ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ ಎಂದು ತಿಳಿಸಿದರು.

ಢಿಕ್ಕಿ ಹೊಡೆದಿದ್ದರಿಂದ ಕೆಲಕಾಲ ಸಂಚಾರ ದಟ್ಟಣೆ ಉಂಟಾಗಿತ್ತು. ಢಿಕ್ಕಿ ಹೊಡೆದ ಬಸ್ ಅನ್ನು ಕ್ರೇನ್ ಮೂಲಕ ತೆರವು ಗೊಳಿಸಲಾಗಿದ್ದು, ಪ್ರಕರಣ ದಾಖಲಿಸಿರುವ ಹಲಸೂರು ಗೇಟ್ ಸಂಚಾರ ಪೊಲೀಸರು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News