ಉಗ್ರರೊಂದಿಗೆ ಸಂಪರ್ಕ ಆರೋಪ : ತೀರ್ಥಹಳ್ಳಿಗೆ ಎನ್ ಐಎ ಅಧಿಕಾರಿಗಳ ಭೇಟಿ
Update: 2021-03-10 08:53 GMT
ಶಿವಮೊಗ್ಗ : ತೀರ್ಥಹಳ್ಳಿಯ ಇಬ್ಬರು ಯುವಕರು ಉಗ್ರರೊಂದಿಗೆ ಸಂಪರ್ಕ ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತೀರ್ಥಹಳ್ಳಿಯ ಮನೆಯೊಂದಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವುದಾಗಿ ತಿಳಿದು ಬಂದಿದೆ.
ತೀರ್ಥಹಳ್ಳಿಯ ಮೀನು ಮಾರುಕಟ್ಟೆ ರಸ್ತೆಯಲ್ಲಿರುವ ಮನೆಯೊಂದಕ್ಕೆ ಭೇಟಿ ನೀಡಿ ಸ್ಥಳೀಯ ಪೊಲೀಸರ ಸಹಕಾರದೊಂದಿಗೆ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಕಳೆದ ವರ್ಷ ತೀರ್ಥಹಳ್ಳಿಯಲ್ಲಿ ಸ್ಯಾಟಲೈಟ್ ಫೋನ್ ಬಳಕೆಯಾಗಿತ್ತು. ಈ ಹಿನ್ನೆಲೆಯಲ್ಲಿ ಶೋಧ ಕಾರ್ಯ ನಡೆಸಲಾಗಿತ್ತು. ಆದರೆ ಈ ಯುವಕರು ನಾಪತ್ತೆಯಾಗಿದ್ದರು. ಇದೇ ಪ್ರಕರಣ ಸಂಬಂಧ ವಿಚಾರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.