×
Ad

ಪ್ರಜಾಸತ್ತಾತ್ಮಕವಾಗಿ ಚುನಾವಣೆ ಗೆಲ್ಲಬೇಕು, ಹಿಂಸೆಯಿಂದ ಅಲ್ಲ: ಮಮತಾ ಮೇಲಿನ ಹಲ್ಲೆ ಖಂಡಿಸಿದ ಕುಮಾರಸ್ವಾಮಿ

Update: 2021-03-11 17:30 IST

ಬೆಂಗಳೂರು, ಮಾ.11: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲಿನ ಹಲ್ಲೆ ಘಟನೆ ತಿಳಿದು ಆಘಾತವಾಯ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರು ಶೀಘ್ರ ಗುಣಮುಖರಾಗಲಿ. ಚುನಾವಣೆಗಳನ್ನು ಪ್ರಜಾಸತ್ತಾತ್ಮಕವಾಗಿ ಗೆಲ್ಲಬೇಕು. ಹಿಂಸೆಯಿಂದ ಅಲ್ಲ. ಘಟನೆಯನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು. ಚುನಾವಣಾ ವ್ಯವಸ್ಥೆಯನ್ನು ರಕ್ಷಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಬಂಗಾಳದಲ್ಲಿ ಅತ್ಯಂತ ಜನಪರ ಮತ್ತು ಸ್ವಚ್ಛ ಆಡಳಿತವನ್ನು ಮಮತಾ ಬ್ಯಾನರ್ಜಿ ನೀಡಿದ್ದಾರೆ. ಹೀಗಾಗಿ ಅವರಿಗೆ ಜನಬೆಂಬಲ ಅಪಾರವಾಗಿದೆ. ಎಂಥ ಶಕ್ತಿಯ ವಿರುದ್ಧ ಹೋರಾಡಿಯಾದರೂ ಬಂಗಾಳವನ್ನು ಗೆಲ್ಲುವ ಶಕ್ತಿ ಮಮತಾ ಅವರಿಗಿದೆ. ಈ ಚುನಾವಣೆಯನ್ನು ಅವರು ಗೆಲ್ಲುತ್ತಾರೆ ಕೂಡ. ಅವರಿಗೆ ಈಗ ನೈತಿಕ ಬೆಂಬಲ ನೀಡಬೇಕಿದೆ. ನಾನು ಅವರ ಬೆಂಬಲಕ್ಕಿರುವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News