ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ,ನಾಲ್ವರು ಕಾರ್ಮಿಕರು ಬಲಿ, ಓರ್ವನ ಸ್ಥಿತಿ ಗಂಭೀರ
Update: 2021-03-20 07:37 GMT
ಮುಂಬಯಿ: ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯ ಕೈಗಾರಿಕಾ ಪ್ರದೇಶದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ.
ಸುಮಾರು 40ರಿಂದ 50 ಮಂದಿ ಫ್ಯಾಕ್ಟರಿಯೊಳಗೆ ಸಿಲುಕಿಹಾಕಿಕೊಂಡಿದ್ದಾರೆ. ಸಿಲುಕಿಹಾಕಿಕೊಂಡಿರುವ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯು ಭರದಿಂದ ಸಾಗುತ್ತಿದೆ ಎಂದು ಆಂಗ್ಲವಾಹಿನಿಯೊಂದು ವರದಿ ಮಾಡಿದೆ.
ಸ್ಫೋಟಕ್ಕೆ ನಿಖರ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.