ಮಾರಕಾಸ್ತ್ರಗಳಿಂದ ದಾಳಿ ನಡೆಸಿ ರಿಯಲ್‍ ಎಸ್ಟೇಟ್ ಉದ್ಯಮಿ ಕೊಲೆ

Update: 2021-03-20 14:51 GMT

ಬೆಂಗಳೂರು, ಮಾ.20: ಕೆಲಸದ ನಿಮಿತ್ತ ನಗರಕ್ಕೆ ಬಂದಿದ್ದ ಮೈಸೂರಿನ ರಿಯಲ್‍ ಎಸ್ಟೇಟ್ ಉದ್ಯಮಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರುವ ಘಟನೆ ಎಸ್.ಜಿ.ಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೈಸೂರಿನ ನಿವಾಸಿ ಮುಹಮ್ಮದ್ ಶಫಿ(32) ಕೊಲೆಯಾದ ರಿಯಲ್‍ ಎಸ್ಟೇಟ್ ಉದ್ಯಮಿ ಎಂದು ತಿಳಿದುಬಂದಿದೆ.

ಶುಕ್ರವಾರ ಮೈಸೂರಿನಿಂದ ಕಾರ್ಯ ನಿಮಿತ್ತ ಬೆಂಗಳೂರಿನ ಗುರಪ್ಪನಪಾಳ್ಯಕ್ಕೆ ಬಂದಿದ್ದ ಮುಹಮ್ಮದ್ ಶಫಿ ಅವರನ್ನು ಸಂಜೆ 6.15ರ ಸುಮಾರಿನಲ್ಲಿ ಮೂರ್ನಾಲ್ಕು ಮಂದಿ ದುಷ್ಕಮಿಗಳು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಸುದ್ದಿ ತಿಳಿದು ಎಸ್.ಜಿ.ಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಶವವನ್ನು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News