ಮೈಸೂರಿಗೆ ಭೇಟಿ ನೀಡಿದ ಸುಪ್ರೀಂ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ: ಟ್ರಾಫಿಕ್ ಜಾಮ್
Update: 2021-03-20 20:21 IST
ಮೈಸೂರು,ಮಾ.20: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಅವರು ಶನಿವಾರ ಮೈಸೂರಿಗೆ ಭೇಟಿ ನೀಡಿದರು.
ನಗರದ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಬೋಬ್ಡೆ ಅವರನ್ನು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸ್ವಾಗತಿಸಿದರು.
ಈ ವೇಳೆ ನಂಜನಗೂಡು ರಸ್ತೆ ಟ್ರಾಫಿಕ್ ಜಾಮ್ ಆಗಿತ್ತು. ಕೆಲಹೊತ್ತು ಸಂಚಾರ ವ್ಯವಸ್ಥೆ ಸಮಸ್ಯೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸಿದರು.