ಪಂಜಾಬ್: ಪೊಲೀಸ್-ನಿಹಾಂಗ್ ಸಿಖ್ಖರ ನಡುವೆ ಘರ್ಷಣೆ; ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಗಂಭೀರ ಗಾಯ
Update: 2021-03-21 17:40 GMT
ಚಂಡಿಗಢ, ಮಾ. 17: ಪಂಜಾಬ್ನ ತರನ್ತರನ್ನಲ್ಲಿ ರವಿವಾರ ನಿಹಾಂಗ್ ಸಿಖ್ಖರು ಹಾಗೂ ಪೊಲೀಸರ ನಡುವೆ ನಡೆದ ಘರ್ಷಣೆ ಸಂದರ್ಭ ನಿಹಾಂಗ್ ಸಿಕ್ಖರು ಖಡ್ಗದಿಂದ ದಾಳಿ ನಡೆಸಿದ ಪರಿಣಾಮ ಇಬ್ಬರು ಪೊಲೀಸ್ ಅಧಿಕಾರಿಗಳು ಗಂಭೀರ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತರನ್ತರನ್ ಜಿಲ್ಲೆಯ ಶೂರ್ಸಿಂಗ್ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳು ಗಂಭೀರ ಗಾಯಗೊಂಡಿದ್ದಾರೆ. ಮಹಾರಾಷ್ಟ್ರದ ನಾಂದೇಡ್ನಲ್ಲಿ ಕೊಲೆ ನಡೆಸಿದ ಇಬ್ಬರು ನಿಹಾಂಗ್ ಸಿಖ್ಖರು ಇಲ್ಲಿಗೆ ಆಗಮಿಸಿದ್ದಾರೆ ಎಂಬ ಮಾಹಿತಿ ಸ್ವೀಕರಿಸಿದ ಬಳಿಕ ಪೊಲೀಸರು ಅವರನ್ನು ಬಂಧಿಸಲು ಇಲ್ಲಿಗೆ ಆಗಮಿಸಿದ್ದರು.
ಈ ಸಂದರ್ಭ ಪೊಲೀಸರು ಹಾಗೂ ನಿಹಾಂಗ್ ಸಿಖ್ಖರ ನಡುವೆ ಘರ್ಷಣೆ ನಡೆದಿದೆ. ನಿಹಾಂಗ್ ಸಿಖ್ಖರು ನಡೆಸಿದ ದಾಳಿಯಲ್ಲಿ ಪೊಲೀಸ್ ಅಧಿಕಾರಿಗಳಾದ ನರೇಂದ್ರ ಸಿಂಗ್ ಹಾಗೂ ಬಲ್ವಿಂದರ್ ಸಿಂಗ್ ಗಂಭೀರ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.