ರಾಜ್ಯದಲ್ಲಿ ಸದ್ಯ ಯಾವುದೇ ಲಾಕ್ ಡೌನ್ ಇಲ್ಲ: ಬಿ.ಸಿ.ಪಾಟೀಲ್
Update: 2021-03-22 14:00 IST
ಬೆಂಗಳೂರು, ಮಾ.22: ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಸದ್ಯಕ್ಕೆ ಲಾಕ್ ಡೌನ್ ಜಾರಿ ಮಾಡದಿರಲು ಸರಕಾರ ನಿರ್ಧರಿಸಿರುವುದಾಗಿ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ವಿಧಾನಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಪ್ರಸಕ್ತ ಆರ್ಥಿಕ ಪರಿಸ್ಥಿಯಲ್ಲಿ ಲಾಕ್ ಡೌನ್ ಜಾರಿಗೊಳಿಸುವ ಪರಿಸ್ಥಿತಿ ಇಲ್ಲ. ಕಳೆದ ವರ್ಷಕ್ಕೂ ಈ ವರ್ಷಕ್ಕೂ ಪರಿಸ್ಥಿತಿ ಬೇರೆ ಇದೆ. ಸಾಕಷ್ಟು ಮುನ್ನೆಚ್ಚರಿಕೆ ತೆಗೆದುಕೊಂಡಿದ್ದೇವೆ. ಜನರೂ ಪರಿಸ್ಥಿತಿ ಅರ್ಥ ಮಾಡಿಕೊಳ್ಳಬೇಕು ಎಂದರು.