ಬಿಜೆಪಿಯಿಂದ ಟಿಕೆಟ್ ಸಿಗುವ ಸಾಧ್ಯತೆ ಇದೆ: ಪ್ರಮೋದ್ ಮುತಾಲಿಕ್

Update: 2021-03-22 16:45 GMT

ಹುಬ್ಬಳ್ಳಿ, ಮಾ.22: ಮುಂಬರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಯಿಂದ ನನಗೆ ಟಿಕೆಟ್ ಸಿಗುವ ಸಾಧ್ಯತೆಯಿದೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ನಾನು ಟಿಕೆಟ್ ಆಕಾಂಕ್ಷಿಯಾಗಿದ್ದೇನೆಂದು ಬಿಜೆಪಿ ನಾಯಕರಿಗೆ ತಿಳಿಸಿದ್ದೇನೆ. ಆ ನಾಯಕರ ಮಾತಿನಿಂದಲೂ ಟಿಕೆಟ್ ಸಿಗುವಂತಹ ಭರವಸೆ ವ್ಯಕ್ತವಾಗಿದೆ ಎಂದು ತಿಳಿಸಿದ್ದಾರೆ.

ನಾನು ರಾಜಕೀಯ ಜೀವನದ ಕೊನೆಯ ಹಂತದಲ್ಲಿದ್ದೇನೆ. ಹೀಗಾಗಿ ಟಿಕೆಟ್ ಕೊಡಿಯೆಂದು ಮನವಿ ಮಾಡಿದ್ದೇನೆ. ಒಂದು ವೇಳೆ ಟಿಕೆಟ್ ನೀಡದಿದ್ದರೆ ಪಕ್ಷೇತರನಾಗಿ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ. ಬಿಜೆಪಿ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಪ್ರಚಾರ ಮಾಡುತ್ತೇನೆಂದು ಅವರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News