ಕಾಪು: ಮಾ.25ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ

Update: 2021-03-23 15:21 GMT

ಕಾಪು, ಮಾ.23: ಜಮಿಯ್ಯತುಲ್ ಫಲಾಹ್ ಕಾಪು ತಾಲೂಕು ಘಟಕ, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟ ಕಾಪು ತಾಲೂಕು ಘಟಕ ಮತ್ತು ಉಡುಪಿ ಲೋಂಬಾರ್ಡ್ ಸ್ಮಾರಕ ಆಸ್ಪತ್ರೆ, ವೈದ್ಯಕೀಯ ಪ್ರತಿನಿಧಿಗಳ ಸಂಘಗಳ ಸಹಭಾಗಿತ್ವದಲ್ಲಿ ಉಚಿತ ಸಾಮಾನ್ಯ ಆರೋಗ್ಯ, ನೇತ್ರ ಹಾಗೂ ದಂತ ತಪಾಸಣಾ ಶಿಬಿರ ವನ್ನು ಮಲ್ಲಾರು ಆಯುಷ್ ಕ್ಲಿನಿಕ್‌ನಲ್ಲಿ ಮಾ.25ರಂದು ಬೆಳಗ್ಗೆ 9ಗಂಟೆಯಿಂದ ಮಧ್ಯಾಹ್ನ 1ಗಂಟೆಯವರೆಗೆ ಏರ್ಪಡಿಸಲಾಗಿದೆ.

ಮುಖ್ಯ ಅತಿಥಿಗಳಾಗಿ ಕಾಪು ಶಾಸಕ ಲಾಲಾಜಿ ಆರ್.ಮೆಂಡನ್, ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಬೆಳಪು ಸಿಎ ಬ್ಯಾಂಕ್ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ ಭಾಗವಹಿಸಲಿರುವರು. ಹೆಚ್ಚಿನ ವಿವರಗಳಿಗಾಗಿ ಶಭಿ ಅಹಮ್ಮದ್ ಖಾಝಿ 9901596303, ಮುಹಮ್ಮದ್ ಇಕ್ಬಾಲ್ 9449030751, ರೋಹಿ ರತ್ನಾಕರ್ 9242464674 ಅವರನ್ನು ಸಂಪರ್ಕಿ ಬಹುದು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News