ಬೆಂಕಿ ಆಕಸ್ಮಿಕದಿಂದ ಗಾಯಾಳು ಮೃತ್ಯು

Update: 2021-03-23 17:13 GMT

ಕೊಲ್ಲೂರು, ಮಾ.23: ಆಕಸ್ಮಿಕವಾಗಿ ಒಲೆಯ ಬೆಂಕಿಯ ತಗಲಿ ವ್ಯಕ್ತಿ ಯೊಬ್ಬರು ಮೃತಪಟ್ಟ ಘಟನೆ ವಂಡ್ಸೆ ಗ್ರಾಮದ ಮೇಲ್ಮನೆ ಎಂಬಲ್ಲಿ ನಡೆದಿದೆ.

ಮೃತರನ್ನು ಶಶಿಧರ ವಿ.ಎಂ.(57) ಎಂದು ಗುರುತಿಸಲಾಗಿದೆ. ಇವರು ಮಾ.22ರಂದು ಮಧ್ಯಾಹ್ನ ವೇಳೆ ಮನೆಯಲ್ಲಿ ಅಡುಗೆ ಒಲೆಯ ಕಟ್ಟಿಗೆಯನ್ನು ಮುಂದಕ್ಕೆ ಹಾಕುತ್ತಿರುವ ವೇಳೆ ಆಕಸ್ಮಿಕವಾಗಿ ಒಲೆಯ ಬೆಂಕಿಯು ಶರ್ಟಿಗೆ ತಾಗಿ ಬೆಂಕಿಯು ದೇಹಕ್ಕೆ ಹರಡಿಕೊಂಡಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇವರು, ಮಾ.23ರಂದು ನಸುಕಿನ ವೇಳೆ ಚಿಕಿತ್ಸೆ ಫಲಕಾರಿ ಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು.

ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News