ನಮ್ಮನ್ನು ನಂಬಿದ ಕುಟುಂಬಸ್ಥರಿಗೆ ಅಪಮಾನವಾಗಬಾರದು: ಸಾ.ರಾ.ಮಹೇಶ್

Update: 2021-03-25 12:45 GMT

ಬೆಂಗಳೂರು, ಮಾ.25: ನಾವು ರಾಜಕೀಯದಲ್ಲಿರುವವರು. ಬಡಿದಾಡುತ್ತೇವೆ, ಬೈದಾಡಿಕೊಳ್ಳುತ್ತೇವೆ. ಆದರೆ, ನಮ್ಮ ಬಡಿದಾಟಗಳಲ್ಲಿ ಹೆಂಡತಿ, ಮಕ್ಕಳನ್ನು ತರುವುದು ನಮ್ಮ ನಮ್ಮ ಕುಟುಂಬಗಳಿಗೆ ನಾವೇ ಮಾಡಿಕೊಂಡ ಅಪಮಾನ. ನಮ್ಮನ್ನು ನಾವು ರಕ್ಷಿಸಿಕೊಳ್ಳಲು ನಮ್ಮ ಕುಟುಂಬಗಳನ್ನು ಅಡ್ಡತರುವುದು ವಂಚನೆಯೇ ಸರಿ. ನಮ್ಮನ್ನೇ ನಂಬಿದ ಕುಟುಂಬಸ್ಥರಿಗೆ ಎಂದಿಗೂ ಅಪಮಾನವಾಗಬಾರದು ಎಂದು ಮಾಜಿ ಸಚಿವ ಸಾ.ರಾ.ಮಹೇಶ್ ಟ್ವೀಟ್ ಮಾಡಿದ್ದಾರೆ.

ಸಮಾಜವನ್ನೇ ಶಂಕೆಗೆ ದೂಡಿದವರು ತಾವು ಸೃಷ್ಟಿ ಮಾಡಿದ ಅನಾಹುತದ ಬಗ್ಗೆ ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಹೇಳಿಕೆ ತಮ್ಮದೇ ಕುಟುಂಬದಲ್ಲಿ ಸೃಷ್ಟಿ ಮಾಡಿರಬಹುದಾದ ಅಪನಂಬಿಕೆಯನ್ನು ಒಮ್ಮೆ ಗಮನಿಸಬೇಕು. ಸಮಾಜದ ಡೊಂಕು ಪ್ರಶ್ನಿಸಿದವರು ತಮ್ಮ ಕುಟುಂಬದ ದೃಷ್ಟಿಯಲ್ಲಿ ದೊಡ್ಡವರಾದರೋ? ಸಣ್ಣವರಾದರೋ? ನಂಬಿಕೆ ಉಳಿಸಿಕೊಂಡರೋ, ಕಳೆದುಕೊಂಡರೋ? ಎಂದು ಸಾ.ರಾ.ಮಹೇಶ್ ಪ್ರಶ್ನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News