×
Ad

ಸಂಸತ್ತಿನಲ್ಲಿ ಗಣಿ ಮತ್ತು ಖನಿಜಗಳ(ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ ಅಂಗೀಕಾರ: ಸಚಿವ ನಿರಾಣಿ ಸ್ವಾಗತ

Update: 2021-03-25 23:12 IST

ಬೆಂಗಳೂರು, ಮಾ.25: ಸಂಸತ್ತಿನ ಉಭಯ ಸದನಗಳಲ್ಲಿ ಮಂಡನೆಯಾದ ಗಣಿ ಮತ್ತು ಖನಿಜಗಳ (ಅಭಿವೃದ್ಧಿ ಮತ್ತು ನಿಯಂತ್ರಣ) ಕಾಯ್ದೆ ಅಂಗೀಕಾರವಾಗಿರುವುದನ್ನು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಸ್ವಾಗತಿಸಿದ್ದಾರೆ.

ಈ ಕಾಯ್ದೆ ಅಂಗೀಕಾರಕ್ಕೆ ವಿಶೇಷ ಆಸಕ್ತಿ ವಹಿಸಿದ ಪ್ರಧಾನಮಂತ್ರಿ ನರೇಂದ್ರಮೋದಿ ಹಾಗೂ ಕೇಂದ್ರ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಕೃತಜ್ಞತೆಗಳು. ಕಲ್ಲಿದ್ದಲು ಮತ್ತು ಗಣಿಗಾರಿಕೆ ಕ್ಷೇತ್ರದಲ್ಲಿ ವ್ಯಾಪಾರ ಮಾಡುವ ಸುಲಭತೆಯನ್ನು ಉತ್ತೇಜಿಸುವ ಉದ್ದೇಶದಿಂದ ಈ ತಿದ್ದುಪಡಿ ತಂದಿರುವುದು ಅಭಿವೃದ್ಧಿಯ ದೃಷ್ಟಿಯಿಂದ ಸಕಾರಾತ್ಮಕ ಬೆಳವಣಿಗೆ ಎಂದು ಅವರು ಹೇಳಿದ್ದಾರೆ.

ಖನಿಜ ಕ್ಷೇತ್ರದಲ್ಲಿ ನೀತಿ ಸುಧಾರಣೆಗಳು ಉತ್ಪಾದನೆಯನ್ನು ಹೆಚ್ಚಿಸುವ ಮತ್ತು ಉದ್ಯೋಗವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದ್ದು, ಗಣಿಗಾರಿಕೆ ಕೃಷಿಯ ನಂತರದ ಸ್ಥಾನದಲ್ಲಿದ್ದು, ಖನಿಜ ಸಮೃದ್ಧ ಪ್ರದೇಶಗಳಲ್ಲಿ ಉದ್ಯೋಗ ಸೃಷ್ಟಿಗೆ ಇದು ಗಮನಾರ್ಹವಾಗಿ ಕೊಡುಗೆ ನೀಡುತ್ತದೆ ಎಂದು ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟಿದ್ದಾರೆ.

ಸಾಂಪ್ರದಾಯಿಕವಾಗಿ, ಗಣಿಗಾರಿಕೆಯಲ್ಲಿ ಶೇ.1ರಷ್ಟು ಬೆಳವಣಿಗೆಯು ಕೈಗಾರಿಕಾ ಉತ್ಪಾದನೆಯ ಬೆಳವಣಿಗೆಯ ದರದಲ್ಲಿ ಶೇ.1.2-1.4ರಷ್ಟು ಹೆಚ್ಚಳಕ್ಕೆ ಕಾರಣವಾಗಿ, ನೇರ ಉದ್ಯೋಗವು 10 ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸುತ್ತದೆ. ದೇಶದ ಜಿಡಿಪಿಯಲ್ಲಿ ಖನಿಜ ಕ್ಷೇತ್ರದ ಕೊಡುಗೆ ತುಂಬಾ ಕಡಿಮೆಯಾಗಿದ್ದು(ಜಿಡಿಪಿಯ ಶೇ.1.75ರಷ್ಟು), ನಮ್ಮ ರಾಷ್ಟ್ರೀಯ ಖನಿಜ ನೀತಿ 7 ವರ್ಷಗಳಲ್ಲಿ ಖನಿಜಗಳ ಉತ್ಪಾದನೆಯನ್ನು ಶೇ.200ರಷ್ಟು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಅವರು ತಿಳಿಸಿದ್ದಾರೆ.

ಭವಿಷ್ಯದಲ್ಲಿ ಇಂತಹ ಸನ್ನಿವೇಶಗಳನ್ನು ತಪ್ಪಿಸುವ ಸಲುವಾಗಿ, ಕಾಯಿದೆಯ ಸೆಕ್ಷನ್ 8 ಬಿ ಅಡಿಯಲ್ಲಿ ಅನುಮತಿಗಳು ಇತ್ಯಾದಿಗಳನ್ನು ವರ್ಗಾವಣೆ ಮಾಡುವ ಸೌಲಭ್ಯವನ್ನು ವಿಸ್ತರಿಸಿದರೆ ಹರಾಜು ಮಾಡಿದ ಗಣಿಗಳಿಂದ ಉತ್ಪಾದನೆಗೆ ಅನುಕೂಲವಾಗಲಿದೆ ಎಂದು ಮುರುಗೇಶ್ ನಿರಾಣಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News