ಕುಂದಾಪುರ: ಮೂಡ್ಲಕಟ್ಟೆ ಎಂಐಟಿಯಲ್ಲಿ ಉದ್ಯೋಗ ಮೇಳ ಉದ್ಘಾಟನೆ

Update: 2021-03-26 15:27 GMT

ಕುಂದಾಪುರ, ಮಾ.26: ಕುಂದಾಪುರ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ವತಿಯಿಂದ ಕಾಲೇಜಿನ ಕ್ಯಾಂಪಸ್‌ನಲ್ಲಿ ಶುಕ್ರವಾರ ‘ಉದ್ಯೋಗ ಮೇಳ‘ ವನ್ನು ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಯಾಗಿ ಆಗಮಿಸಿ ಉದ್ಯೋಗ ಮೇಳವನ್ನು ಉದ್ಘಾಟಿಸಿದ ಸುರತ್ಕಲ್ ಎನ್‌ಟಿಕೆ ಪ್ರಾಧ್ಯಾಪಕ ಪ್ರೊ.ನರೇಂದ್ರನಾಥ್ ಎಸ್. ಮಾತನಾಡಿ,ಪ್ರತಿಯೊಬ್ಬರೂ ತಮ್ಮದೇ ಆದ ಧ್ಯೇಯ ಮತ್ತು ಗುರಿಯನ್ನು ಅಳವಡಿಸಿಕೊಂಡು ಅದನ್ನು ಸಾಕಾರಗೊಳಿಸುವ ಕಡೆ ಪ್ರಯತ್ನಶೀಲರಾಗಬೇಕು ಎಂದು ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಡಾ.ಚಂದ್ರರಾವ್ ಮದಾನೆ ಅತಿಥಿಗಳನ್ನು ಸ್ವಾಗತಿಸಿ ಮಾತನಾಡಿ, ಕೆಲಸ ಮಾಡುವ ಮನಸ್ಥಿತಿ ಹಾಗೂ ಶ್ರದ್ಧೆ ಇಟ್ಟುಕೊಂಡು ದುಡಿದರೆ ಜೀವನದಲ್ಲಿ ಯಶಸ್ಸು ಪಡೆಯಲು ಸಾಧ್ಯ ಎಂದರು. ಕಾಲೇಜಿನ ಪ್ಲೇಸ್ಮೆಂಟ್ ಡೀನ್ ಸತ್ಯನಾರಾಯಣ, ಅಭ್ಯರ್ಥಿಗಳ ಕೌಶಲ್ಯ ಹಾಗೂ ಪ್ರತಿಭೆಗೆ ತಕ್ಕಂತಹ ಕಂಪೆನಿಗಳನ್ನು ಆಯ್ದುಕೊಳ್ಳಲು ಸಲಹೆ ನೀಡಿದರು. ಉದ್ಯೋಗ ಮೇಳದಲ್ಲಿ ಹೆಸರಾಂತ ಬಹುರಾಷ್ಟ್ರೀಯ ಹಾಗೂ ರಾಷ್ಟ್ರೀಯ ಕಂಪೆನಿಗಳು ಪಾಲ್ಗೊಡಿದ್ದು ಉತ್ತಮ ಫಲಿತಾಂಶವನ್ನು ನಿರೀಕ್ಷಿಸುತ್ತಿದ್ದೇವೆ ಎಂದರು.

ಕೊಟುಂಬ್ ಸಂಸ್ಥೆಯ ಸಹ ಸಂಸ್ಥಾಪಕ ಹೇಮಂತ್, ಉಪ ಪ್ರಾಂಶುಪಾಲ ಪ್ರೊ.ಮೆಲ್ವಿನ್ ಡಿ ಸೋಜ,ವಿಭಾಗದ ಮುಖ್ಯಸ್ಥರು ಹಾಗು ಉದ್ಯೋಗಾಕಾಂಕ್ಷಿಗಳು ಉಪಸ್ಥಿತರಿದ್ದರು. ಕಾಲೇಜಿನ ಅಕಾಡೆಮಿಕ್ ಡೀನ್, ಡಾ.ಪ್ರತಿಭಾ ಎಂ. ಪಟೇಲ್ ಕಾರ್ಯಕ್ರಮ ನಿರ್ವಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News