ಡಿ.ಕೆ.ಶಿವಕುಮಾರ್ ವಿರುದ್ಧ ಅಟ್ರಾಸಿಟಿ ಕೇಸ್ ಹಾಕುತ್ತೇನೆ: ರಮೇಶ್ ಜಾರಕಿಹೊಳಿ

Update: 2021-03-27 13:31 GMT

ಬೆಂಗಳೂರು, ಮಾ.27: ನನ್ನ ಬಳಿ 11 ಸಾಕ್ಷ್ಯಾಧಾರಗಳು ಇವೆ. ಮಹಾನಾಯಕ ಯಾರೆಂದು ಯುವತಿಯ ಪೋಷಕರೇ ಹೇಳಿದ್ದಾರೆ. ಆ ಮಹಾನಾಯಕ ರಾಜಕಾರಣಕ್ಕೆ ನಾಲಾಯಕ್ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದರು.

ಸದಾಶಿವನಗರದ ತನ್ನ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನ್ನ ಬಳಿ 11 ಸಾಕ್ಷ್ಯಾಧಾರಗಳು ಇವೆ. ಆ ಮಹಾನ್ ನಾಯಕ ನರೇಶ್ ಜೊತೆ ಸಂಬಂಧವಿರುವುದನ್ನು ಒಪ್ಪಿಕೊಂಡಿದ್ದಾರೆ. ಆ ಯುವತಿ ನಮ್ಮ ಮನೆಗೆ ಬಂದಿದ್ದಳು ಎಂಬುದನ್ನು ಒಪ್ಪಿಕೊಂಡಿದ್ದಾರೆ. ಹಾಗಾಗಿ ಅವರನ್ನು ಒದ್ದು ಒಳಗೆ ಹಾಕಬೇಕು, ಆ ಯುವತಿಯ ಮೇಲೆ ಕ್ರಮ ಕೈಗೊಳ್ಳಬೇಕು. ನಾನು ತಪ್ಪು ಮಾಡಿದ್ದರೆ ನನ್ನನ್ನು ಒದ್ದು ಒಳಗೆ ಹಾಕಬೇಕು ಎಂದರು.

ಆ ಮಹಾನಾಯಕ ರಾಜಕಾರಣಿ ಆಗಲು. ನಾಲಾಯಕ್. ಅವನಿಗೆ ಮಾಫಿ ಎನ್ನುವುದು ಇಲ್ಲ. ಆತನ ರಾಜೀನಾಮೆ ಕೊಡಿಸುವಂತೆ ಕಾಂಗ್ರೆಸ್ ನಾಯಕರಲ್ಲಿ ಮನವಿ ಮಾಡುತ್ತೇನೆ ಎಂದರು.

ಆ ಯುವತಿಯ ಪೋಷಕರಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದ ಅವರು, ನಾನು ಕನಕಪುರಕ್ಕೆ ಬಂದು ಅವನ ವಿರುದ್ಧ ಹೋರಾಡುತ್ತೇನೆ. ಅವನನ್ನು ಸೋಲಿಸಲು ಕುಮಾರಸ್ವಾಮಿಗೆ ಬೆಂಬಲ ನೀಡಲು ಸಿದ್ದನಿದ್ದೇನೆ. ನನ್ನ ತಮ್ಮನನ್ನು ಕನಕಪುರದಲ್ಲಿ ಕಣಕ್ಕಿಳಿಸುತ್ತೇನೆ ಎಂದರು.

ಮಹಾನಾಯಕ ಡಿ.ಕೆ ಶಿವಕುಮಾರ್ ವಿರುದ್ಧ ಅಟ್ರಾಸಿಟಿ ಮೂಲಕ ಕೇಸ್ ಹಾಕುತ್ತೇವೆ. ನನ್ನ ಬಳಿ 11 ದಾಖಲೆಗಳಿವೆ. ಅದನ್ನು ಎಸ್‌ಐಟಿಗೆ ನೀಡುತ್ತೇನೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News