ಬೆಳ್ತಂಗಡಿ : ಬಸ್ ಢಿಕ್ಕಿ; ಬೈಕ್ ಸವಾರ ಮೃತ್ಯು
Update: 2021-03-27 18:51 IST
ಬೆಳ್ತಂಗಡಿ : ಪಡಂಗಡಿ ಗ್ರಾಮ ಪಂಚಾಯತ್ ಬಳಿಯ ರಸ್ತೆಯಲ್ಲಿ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ, ಬೈಕ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ.
ಪೊಯ್ಯೆಗುಡ್ಡೆ ನಿವಾಸಿ, ಬೈಕ್ ಸವಾರ ಜಾಬಿರ್ (34) ಮೃತರು.
ಧರ್ಮಸ್ಥಳದಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಸರಕಾರಿ ಬಸ್ಸು ಮತ್ತು ಬೈಕ್ ಢಿಕ್ಕಿ ಹೊಡೆದಿದ್ದು, ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ. ಜಾಬಿರ್ ಅವರು ಕಳೆದ 15 ದಿನಗಳ ಹಿಂದೆಯಷ್ಟೇ ವಿದೇಶದಿಂದ ಊರಿಗೆ ಬಂದಿದ್ದರು ಎಂದು ತಿಳಿದು ಬಂದಿದೆ.
ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.