ಸಾರ್ವಜನಿಕ ಸ್ಥಳಗಳಲ್ಲಿ ಜಾತ್ರೆ, ಮೇಳಗಳನ್ನು ನಿರ್ಬಂಧಿಸಿ ರಾಜ್ಯ ಸರಕಾರ ಆದೇಶ

Update: 2021-03-27 17:28 GMT

ಬೆಂಗಳೂರು, ಮಾ.27: ಕೊರೋನ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ, ಧಾರ್ಮಿಕ ಹಬ್ಬಗಳಾದ ಯುಗಾದಿ, ಹೋಳಿ, ಶಬೇ ಬರಾಅತ್, ಗುಡ್ ಫ್ರೈಡೆ ಮುಂತಾದ ಹಬ್ಬ, ಜಾತ್ರೆಗಳ ಸಂದರ್ಭಗಳಲ್ಲಿ ರಾಜ್ಯದ ಯಾವುದೇ ಸಾರ್ವಜನಿಕ ಸ್ಥಳಗಳು, ಸಾರ್ವಜನಿಕ ಮೈದಾನಗಳಲ್ಲಿ, ಸಾರ್ವಜನಿಕ ಉದ್ಯಾನವನಗಳಲ್ಲಿ, ಮಾರುಕಟ್ಟೆಗಳಲ್ಲಿ, ಧಾರ್ಮಿಕ ಸ್ಥಳಗಳು ಸೇರಿದಂತೆ ಇತ್ಯಾದಿ ಸ್ಥಳಗಳಲ್ಲಿ ಸಾರ್ವಜನಿಕ ಸಮಾರಂಭ, ಸಭೆಗಳನ್ನು ನಡೆಸದಂತೆ ಖಚಿತಪಡಿಸಿಕೊಳ್ಳುವಂತೆ ಬಿಬಿಎಂಪಿ ಆಯುಕ್ತರು ಸೇರಿದಂತೆ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಎಲ್ಲ ಪ್ರಾಧಿಕಾರಿಗಳಿಗೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಪಿ.ರವಿಕುಮಾರ್ ಸೂಚನೆ ನೀಡಿದ್ದಾರೆ.

ಅಲ್ಲದೆ, ವಿವಿಧ ಧಾರ್ಮಿಕ ಹಬ್ಬಗಳಿಗೆ ಸಂಬಂಧಿಸಿದಂತೆ ಜಾತ್ರೆಗಳು, ಮೇಳಗಳಲ್ಲಿ ಗುಂಪು ಸೇರುವುದನ್ನು ಸಹ ನಿಷೇಧಿಸಲು ನಿರ್ಧರಿಸಲಾಗಿದೆ. ಆದುದರಿಂದ, ಮುಂಬರುವ ಇತರ ಧಾರ್ಮಿಕ ಉತ್ಸವಗಳೊಂದಿಗೆ ಜಾತ್ರೆಗಳು, ಮೇಳಗಳನ್ನು ಸೇರಿಸಲಾಗಿದೆ ಎಂದು ರವಿಕುಮಾರ್ ಆದೇಶದಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News