ಎ. 11 ರಂದು ದ.ಕ. ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟ; ಆಮಂತ್ರಣ ಪತ್ರಿಕೆ ಬಿಡುಗಡೆ

Update: 2021-03-30 17:01 GMT

ವಿಟ್ಲ : ನೆಟ್ಲಮುಡ್ನೂರು ಗ್ರಾಮದ ನೇರಳಕಟ್ಟೆ ಫ್ರೆಂಡ್ಸ್ ಕ್ಲಬ್ (ಎನ್.ಎಫ್.ಸಿ) ಇದರ ಆಶ್ರಯದಲ್ಲಿ ದ.ಕ. ಜಿಲ್ಲೆ ಮತ್ತು ಬಂಟ್ವಾಳ ತಾಲೂಕು ಅಮೆಚೂರು ಕಬಡ್ಡಿ ಎಸೋಸಿಯೇಶನ್ ಸಹಕಾರದೊಂದಿಗೆ ಎ. 11 ರಂದು ಜರಗಲಿರುವ ಜಿಲ್ಲಾ ಮಟ್ಟದ ಗ್ರಾಮ ಸೀಮಿತ ತಂಡಗಳ ಕಬಡ್ಡಿ ಪಂದ್ಯಾಟ, ಸನ್ಮಾನ ಹಾಗೂ ಅಭಿನಂದನಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನೇರಳಕಟ್ಟೆಯ ಡಿ.ಕೆ. ಸ್ವಾಮಿ ಶ್ರದ್ದಾ ಕೇಂದ್ರದ ಆವರಣದಲ್ಲಿ ನಡೆಯಿತು.

ಡಿ.ಕೆ.ಸ್ವಾಮೀಜಿ ನೇರಳಕಟ್ಟೆ ಬಿಡುಗಡೆಗೊಳಿಸಿದರು. ಈ ಸಂದರ್ಭ ಎನ್ಎಫ್ ಸಿ ಅದ್ಯಕ್ಷ ಲತೀಫ್ ನೇರಳಕಟ್ಟೆ, ಉಪಾಧ್ಯಕ್ಷರಾದ ಮಜೀದ್ ಮಾಣಿ, ರಝಾಕ್ ಸಾಹೇಬ್, ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ಪೆರಾಜೆ, ಪದಾಧಿಕಾರಿಗಳಾದ ಅತಾವುಲ್ಲಾ ನೇರಳಕಟ್ಟೆ, ಬದ್ರುದ್ದೀನ್ ನೇರಳಕಟ್ಟೆ, ಇಸ್ಮಾಯಿಲ್ ಎನ್.ಎಚ್. ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News