ಉತ್ತರಾಖಂಡ: ಕುಂಭಮೇಳದಲ್ಲಿ ಭಾಗವಹಿಸುವ ಪತ್ರಕರ್ತರಿಗೆ ವ್ಯವಸ್ಥೆ

Update: 2021-03-30 18:08 GMT

ಬೆಂಗಳೂರು, ಮಾ.30: ಉತ್ತರಾಖಂಡ ರಾಜ್ಯದ ಹರಿದ್ವಾರದಲ್ಲಿ ಎ.1 ರಿಂದ 30ರವರೆಗೆ ಕುಂಭಮೇಳ ನಡೆಯಲಿದ್ದು, ಕುಂಭಮೇಳದ ಬಗ್ಗೆ ಪ್ರಚಾರ ನೀಡಲು ಉತ್ತರಾಖಂಡ ಸರಕಾರ ಮಾಧ್ಯಮ ಪ್ರತಿನಿಧಿಗಳಿಗೆ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಕುಂಭಮೇಳದಲ್ಲಿ ಭಾಗವಹಿಸುವ ಪತ್ರಕರ್ತರಿಗೆ ಚಂಡಿದ್ವೀಪ ಹಾಗೂ ನೀಲ್‍ದಾರಾ ಎಂಬ ಸ್ಥಳಗಳಲ್ಲಿ ಆಧುನಿಕ ಹಾಗೂ ಸುಸಜ್ಜಿತ ಮಾಧ್ಯಮ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಉತ್ತರಾಖಂಡ ಸರಕಾರವು ಪತ್ರಕರ್ತರ ವಸತಿಗಾಗಿ ವ್ಯವಸ್ಥೆಯನ್ನು ಕಲ್ಪಿಸಿದೆ. ಹೀಗಾಗಿ ಮಾನ್ಯತೆ ಪಡೆದ ಪತ್ರಕರ್ತರು ಈ ಎಲ್ಲಾ ಸವಲತ್ತುಗಳನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದೆ.

ಹರಿದ್ವಾರಕ್ಕೆ ಬರಲು ಇಚ್ಛಿಸುವ ಮಾಧ್ಯಮದವರಿಗೆ ಸಂಕ್ಷಿಪ್ತವಾಗಿ ಮಾರ್ಗದರ್ಶಿ ಪುಸ್ತಿಕೆಯನ್ನು ಪ್ರಕಟಿಸಲಾಗಿದ್ದು, ಕೋವಿಡ್-19ಕ್ಕೆ ಸಂಬಂಧಿಸಿದಂತೆ ಕುಂಭಮೇಳದ ವರದಿಗಾಗಿ ಆಗಮಿಸುವ ಮಾಧ್ಯಮ ಪ್ರತಿನಿಧಿಗಳು ಕಡ್ಡಾಯವಾಗಿ ಸರಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮಾನ್ಯತೆ ಪಡೆದ ಪತ್ರಕರ್ತರು ತಮ್ಮ ಪತ್ರಿಕಾ ಮಾನ್ಯತಾ ಪತ್ರವನ್ನು ತಮ್ಮೊಂದಿಗೆ ಇಟ್ಟುಕೊಂಡಿರಬೇಕು. ಹೆಚ್ಚಿನ ಮಾಹಿತಿಗಾಗಿ dg.info.uk@nic.in  infodg.uk@gmail.com ಅಥವಾ ದೂ.0135 2662971, ಫ್ಯಾಕ್ಸ್ ಸಂಖ್ಯೆ 0135266ನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News