ತಲಪಾಡಿ: ಸ್ಕೂಟರ್ ಗೆ ಲಾರಿ ಢಿಕ್ಕಿ; ನಿವೃತ ಸೈನಿಕ ಮೃತ್ಯು

Update: 2021-03-31 13:13 GMT

ಮಂಜೇಶ್ವರ: ಸ್ಕೂಟರ್ ಗೆ ಲಾರಿ ಢಿಕ್ಕಿ ಹೊಡೆದ ಪರಿಣಾಮ ನಿವೃತ ಸೈನಿಕರೊಬ್ಬರು ಮೃತಪಟ್ಟ ಘಟನೆ ತಲಪಾಡಿಯಲ್ಲಿ ಬುಧವಾರ ನಡೆದಿದೆ. ಉದ್ಯಾವರ ಗುತ್ತು ನಿವಾಸಿ ದಿನೇಶ್ (45) ಮೃತಪಟ್ಟವರು.  

ಸೈನಿಕ ನಿವೃತ್ತಿಯ ಬಳಿಕ ಮಂಗಳೂರಿನ ಸಂಸ್ಥೆಯೊಂದರಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಅವರು ಎಂದಿನಂತೆ ಸ್ಕೂಟರಿನಲ್ಲಿ ಕರ್ತವ್ಯಕ್ಕೆ ತೆರಳುತ್ತಿರುವ ಮಧ್ಯೆ ಕೇರಳ ಭಾಗದಿಂದ ಆಗಮಿಸಿದ ಲಾರಿಯೊಂದು ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿದೆ. ಢಿಕ್ಕಿಯ ರಭಸಕ್ಕೆ ರಸ್ತೆಗೆಸೆಯಲ್ಪಟ್ಟ ದಿನೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಿಂಬದಿ ಸವಾರ ಯತೀಶ್ ಎಂಬವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ .

ಮಂಜೇಶ್ವರ ಪೊಲೀಸರು ಸ್ಥಳಕ್ಕಾಗಮಿಸಿ ಮಹಜರು ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News