ನಟ ಜಗ್ಗೇಶ್ ವಿರುದ್ಧ ಕೃಷಿ ಸಚಿವ ಬಿ.ಸಿ.ಪಾಟೀಲ್ ಅಸಮಾಧಾನ

Update: 2021-03-31 17:06 GMT

ಬೆಂಗಳೂರು, ಮಾ.31: ಜಗ್ಗೇಶ್ ಅವರೇ, ಗ್ರಾಮೀಣ ಪ್ರದೇಶದಿಂದ ಬಂದಂತಹ ನಮ್ಮ ನಿಮ್ಮಂತಹವರು ಚಿತ್ರರಂಗಕ್ಕೆ ಹೊಸ ಪೀಳಿಗೆ ಬರಬೇಕು. ಹೊಸ ತಲೆಮಾರಿನ ಪ್ರತಿಭೆಗಳನ್ನು, ಹೊಸಬರನ್ನು ಹಾಗೂ ಅವರ ಕಲೆಯನ್ನು ಪ್ರೋತ್ಸಾಹಿಸಬೇಕು, ಅವರನ್ನು ಬೆಳೆಸಬೇಕೇ ಹೊರತು ಹೊಸ ಪ್ರತಿಭೆಗಳನ್ನು ನಿರುತ್ಸಾಹಗೊಳಿಸಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಟ್ವೀಟ್ ಮಾಡಿದ್ದಾರೆ.

ಆದರೆ ನೀವು “ಯಾರ್ಯಾರೋ ಹೀರೋಗಳು ಬರ್ತಾರೆ, ಅವರ ಸಿನಿಮಾ ನೋಡ್ಬೇಡಿ” ಎಂದು ಹೇಳಿರುವುದು ತಪ್ಪು. ಹಳೆಯ ಚಿಗುರು ಹೋಗದೇ ಹೊಸ ಚಿಗುರು ಬರಲು ಸಾಧ್ಯವಿಲ್ಲ. ಅದರಂತೆಯೇ ಚಿತ್ರರಂಗಕ್ಕೆ ಬರುವ ಹೊಸಬರನ್ನು ನಾವು ಪ್ರೋತ್ಸಾಹಿಸಲೇಬೇಕು. ಅವರನ್ನು ತಿರಸ್ಕರಿಸುವುದಾಗಲೀ ನಿರುತ್ಸಾಹಗೊಳಿಸುವುದಾಗಲೀ ಮಾಡಬಾರದು ಎಂದು ಅವರು ಮನವಿ ಮಾಡಿದ್ದಾರೆ.

ಜಗ್ಗೇಶ್ ಅವರೇ, ದಯವಿಟ್ಟು ಇಂತಹ ನಿರುತ್ಸಾಹಗೊಳಿಸುವ ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ನೀಡಬೇಡಿ. ನಾನೊಬ್ಬ ಪುಟ್ಟ ಕಲಾವಿದನಾಗಿ ನಿಮ್ಮೊಂದಿಗೆ ಬೆಳೆದವನಾದ್ದರಿಂದ ನಿಮಗೆ ಈ ವಿಷಯವನ್ನು ಗಮನಕ್ಕೆ ತರುತ್ತಿದ್ದೇನೆ. ನಮ್ಮ ನಿಮ್ಮ ಮಕ್ಕಳು ಸಹ ಚಿತ್ರರಂಗಕ್ಕೆ ಬರಬೇಕು. ಯುವಕರನ್ನು ಹೊಸಬರನ್ನು ಪ್ರೋತ್ಸಾಹಿಸಬೇಕೇ ಹೊರತು ಈ ರೀತಿ ಹೊಸಪ್ರತಿಭೆಗಳನ್ನು, ಹೊಸ ಕಲಾವಿದರನ್ನು ನಿರುತ್ಸಾಹಗೊಳಿಸುವಂತಹ ಹೇಳಿಕೆಗಳನ್ನು ನೀಡಬಾರದು ಎಂಬುದು ನನ್ನ ವಿನಂತಿ ಎಂದು ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News