ಬಿಬಿಎಂಪಿಯ ಪೂರ್ವ ವಲಯ ಜಂಟಿ ಆಯುಕ್ತೆ ಆಪ್ತ ಸಹಾಯಕ ಆತ್ಮಹತ್ಯೆ

Update: 2021-03-31 17:47 GMT

ಬೆಂಗಳೂರು, ಮಾ.31: ಬಿಬಿಎಂಪಿಯ ಪೂರ್ವ ವಲಯದ ಜಂಟಿ ಆಯುಕ್ತೆ ಪಲ್ಲವಿ ಅವರ ಆಪ್ತ ಸಹಾಯಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ರಾಕೇಶ್ ಎಂಬಾತ ಆತ್ಮಹತ್ಯೆಗೆ ಮಾಡಿಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.

ಬುಧವಾರ ತನ್ನ ನಿವಾಸದಲ್ಲಿಯೇ ರಾಕೇಶ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ವಿಜಯನಗರ ಠಾಣಾ ಪೊಲೀಸರು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದರು. ಈ ಸಂಬಂಧ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News