ಬೈಂದೂರು ಪ.ಪಂ. ದರ ಪರಿಷ್ಕರಣೆ: ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

Update: 2021-03-31 18:00 GMT

ಉಡುಪಿ, ಮಾ.31: ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಖಾಸಗಿ ನಳಗಳ ನೀರಿನ ಬಳಕೆದಾರರು/ ನೀರಿನ ಕಂದಾಯ/ ನೀರಿನ ಸಂಪರ್ಕ ಶುಲ್ಕ / ಜಾಹೀರಾತುದಾರರು / ಉದ್ದಿಮೆ ಪರವಾನಿಗೆದಾರರು / ಕಟ್ಟಡ ನಿರ್ಮಾಣ ಮತ್ತು ದುರಸ್ಥಿ ನವೀಕರಣದಾರರು/ ಘನತ್ಯಾಜ್ಯ ವಸ್ತು ನಿರ್ವಹಣೆಯ ಬಳಕೆದಾರರು ಹಾಗೂ ಇತರೆ ಶುಲ್ಕದ ದರಗಳ ಉಪವಿಧಿಯನ್ನು ಸಿದ್ಧಪಡಿಸಿದ್ದು, ಪಟ್ಟಣ ಪಂಚಾಯತಿಯ ಆರ್ಥಿಕ ಹಿತದೃಷ್ಟಿಯಿಂದ ಹಾಗೂ ಸರ್ಕಾರದ ಸುತ್ತೋಲೆಯಂತೆ ಪಟ್ಟಣ ಪಂಚಾಯತ್ ಆಡಳಿತಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯ ನಿರ್ಣಯದಂತೆ ದರ ಪರಿಷ್ಕರಿಸಿ ಪಟ್ಟಣ ಪಂಚಾಯತ್ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಸಾರ್ವಜನಿಕರಿಗೆ ಈ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಪ್ರಕಟಣೆ ಪ್ರಕಟಗೊಂಡ 15 ದಿನಗಳ ಒಳಗೆ ಸೂಕ್ತ ಕಾರಣಗಳೊಂದಿಗೆ ಲಿಖಿತ ರೂಪದಲ್ಲಿ ಆಕ್ಷೇಪಣೆಗಳನ್ನು ಕಚೇರಿಗೆ ಸಲ್ಲಿಸಬೇಕು. ತಪ್ಪಿದ್ದಲ್ಲಿ ಯಾವುದೇ ಆಕ್ಷೇಪಣೆ ಇಲ್ಲವೆಂದು ಪರಿಗಣಿಸಿ ನಿಯಮಾನುಸಾರ ಪರಿಷ್ಕೃತ ದರವನ್ನು ಜಾರಿಗೆ ತರಲು ಕ್ರಮವಹಿಸಲಾಗುವುದು ಎಂದು ಬೈಂದೂರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News