'ಈಶ್ವರಪ್ಪ ರಾಜೀನಾಮೆ' ಸುದ್ದಿ ಬಗ್ಗೆ ಶಾಸಕ ರೇಣುಕಾಚಾರ್ಯ ಪ್ರತಿಕ್ರಿಯೆ
Update: 2021-04-02 14:57 GMT
ದಾವಣಗೆರೆ, ಎ.2: ಮಾಧ್ಯಮಗಳಿಗೆ ಹೇಳಿಕೆ ಕೊಡದಂತೆ ರಾಜ್ಯ ನಾಯಕರಿಗೆ ರಾಷ್ಟ್ರ ನಾಯಕರು ಕಟ್ಟಪ್ಪಣೆ ನೀಡಿದ್ದಾರೆ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಲಿದ್ದಾರೆ ಎನ್ನುವುದು ಕೇವಲ ಊಹಾಪೋಹ. ಯಾರೂ ರಾಜೀನಾಮೆ ನೀಡುವುದಿಲ್ಲ. ಇದೇ ಎ.10 ರಂದು ಬೆಂಗಳೂರಿಗೆ ಉಸ್ತುವಾರಿ ಅರುಣ್ ಸಿಂಗ್ ಆಗಮಿಸಿ ಎಲ್ಲವನ್ನು ತಿಳಿಗೊಳಿಸಲಿದ್ದಾರೆ ಎಂದರು.
ಅಮಿತ್ ಶಾ, ಅರುಣ್ ಸಿಂಗ್ ರವರು ಈಗಾಗಲೇ ಮಾತನಾಡಿದ್ದಾರೆ. ಎಲ್ಲಾ ಸಮಸ್ಯೆಗಳು ಬಗೆಹರಿಯಲಿದೆ. ನಾಲ್ಕು ಗೋಡೆಯ ಮಧ್ಯ ಕೂತು ಸಮಸ್ಯೆ ಬಗೆಹರಿಸಲಾಗುವುದು. ಈಗ ಉಪ ಚುನಾವಣೆ ಗೆಲ್ಲುವ ನಿಟ್ಟಿನಲ್ಲಿ ನಾವೆಲ್ಲ ಒಟ್ಟಾಗಿ ಹೋಗುತ್ತೇವೆ ಎಂದರು.