ಸಕಲೇಶಪುರ : ಕಾಡಾನೆ ದಾಳಿಗೆ ಓರ್ವ ಬಲಿ
Update: 2021-04-03 05:39 GMT
ಸಕಲೇಶಪುರ : ಕಾಡಾನೆ ದಾಳಿಗೆ ಓರ್ವ ವ್ಯಕ್ತಿ ಬಲಿಯಾಗಿರುವ ಘಟನೆ ತಾಲೂಕಿನ ಕುನಿಗನಹಳ್ಳಿ ಸಮೀಪ ಹಳೆಕೆರೆ ಗ್ರಾಮದ ಕಾಲುದಾರಿಯಲ್ಲಿ ಶುಕ್ರವಾರ ರಾತ್ರಿ ವೇಳೆ ನಡೆದಿದೆ.
ಶಿವಣ್ಣ ಗೌಡ (65) ಕಾಡಾನೆ ದಾಳಿಯಿಂದ ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಅವರು ಶುಕ್ರವಾರ ರಾತ್ರಿ ಕಾಲು ದಾರಿಯಲ್ಲಿ ಮನೆಗೆ ಹೋಗುತ್ತಿದ್ದಾಗ ಕಾಡಾನೆ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.