ಕೊರೋನ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿ: ಡಾ.ಕೆ.ಸುಧಾಕರ್

Update: 2021-04-05 13:01 GMT

ಬೆಂಗಳೂರು, ಎ.5: ಭಾರತವು ಇದೇ ಮೊದಲ ಬಾರಿಗೆ ಒಂದು ದಿನಕ್ಕೆ ಒಂದು ಲಕ್ಷ ಕೋವಿಡ್ ಪ್ರಕರಣಗಳನ್ನು ದಾಖಲಿಸಿದೆ. ಕಳೆದ ಸಾಲಿನ ಸೆಪ್ಟಂಬರ್ 16ರಂದು 97,894 ಪ್ರಕರಣಗಳು ದಾಖಲು ಆಗಿದ್ದು ಈವರೆಗಿನ ದಾಖಲೆಯಾಗಿತ್ತು. ಮಾಸ್ಕ್ ಧಾರಣೆ, ಸುರಕ್ಷಿತ ಅಂತರ ಕಾಯ್ದುಕೊಳ್ಳುವುದು ಹಾಗೂ ನಿಮ್ಮ ಕೈಗಳನ್ನು ಪದೇ ಪದೇ ಸ್ವಚ್ಛಗೊಳಿಸುತ್ತಿರಿ. ಕೊರೋನದ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಿ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಟ್ವೀಟ್‍ನಲ್ಲಿ ಮನವಿ ಮಾಡಿದ್ದಾರೆ.

ನನ್ನ ತಂದೆಯವರು ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೋನ ಲಸಿಕೆ ಪಡೆದರು ಎಂದು ಹಂಚಿಕೊಳ್ಳಲು ಸಂತಸವಾಗುತ್ತಿದೆ. ನೀವು ನಿಮ್ಮ ತಂದೆ-ತಾಯಂದಿರಿಗೆ ಲಸಿಕೆ ಕೊಡಿಸಿದ್ದೀರಾ? ಎಂದು ಸುಧಾಕರ್ ಟ್ವೀಟ್‍ನಲ್ಲಿ ಪ್ರಶ್ನಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News