×
Ad

ಮೂಡ್ಲಕಟ್ಟೆ ಎಂಐಟಿ ಕಾಲೇಜಿನ ಶಶಾಂಕ್ ಉಡುಪಿ ಜಿಲ್ಲೆಗೆ ಪ್ರಥಮ

Update: 2021-04-06 20:41 IST

ಕುಂದಾಪುರ, ಎ.6: ಸೈಬರ್ ಸೆಕ್ಯೂರಿಟಿ ಉತ್ಕೃಷ್ಟತೆಯ ಕೇಂದ್ರ, ಕರ್ನಾಟಕ ಮತ್ತು ರಾಷ್ಟ್ರೀಯ ಸಾಫ್ಟ್‌ವೇರ್ ಸರ್ವಿಸ್ ಕಂಪನಿಗಳ ಅಸೋಸಿಯೇಷನ್ ವತಿಯಿಂದ ಏರ್ಪಡಿಸಲಾದ ’ಮಾರ್ಚ್ ಫಾರ್ ಸೆಕ್ಯೂರ್ ಕೋಡ್’ ಎಂಬ ಅತೀಬೇಗ ಕೋರ್ಸ್ ಮುಗಿಸುವ ಸ್ಪರ್ಧೆಯಲ್ಲಿ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ವಿದ್ಯಾರ್ಥಿ ಶಶಾಂಕ್ 10,000ರೂ. ನಗದು ಬಹುಮಾನದೊಂದಿಗೆ ಉಡುಪಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.

ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸುಮೀತ್ ಕುಮಾರ್ ದ್ವಿತೀಯ ಸ್ಥಾನ ಪಡೆದಿದ್ದಾರೆ. ಈ ಕೋರ್ಸ್ನ ವಿಜೇತರಿಗೆ ಎ.17 ಮತ್ತು 18 ರಂದು ಅಡ್ವಾನ್ಸಡ್ ಸ್ಕಿಲ್ ಡೆವಲಮೆಂಟ್ ತರಬೇತಿ ಕೇಂದ್ರ ನಡೆಸುವ ಗ್ರ್ಯಾಂಡ್ ಫೈನಲ್ ಸ್ಪರ್ಧೆಗೆ ಅವಕಾಶ ಸಿಕ್ಕಿದ್ದು, ವಿಜೇತರಿಗೆ 25,000 ನಗದು ಬಹುಮಾನ ದೊರೆಯಲಿದೆ.

ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸಿದ್ದಾರ್ಥ್ ಜೆ.ಶೆಟ್ಟಿ, ಪ್ರಾಂಶು ಪಾಲ ಡಾ.ಚಂದ್ರರಾವ್ ಮದಾನೆ, ಉಪ ಪ್ರಾಂಶುಪಾಲ ಪ್ರೊ. ಮೆಲ್ವಿನ್ ಡಿಸೋಜಾ, ಎಲ್ಲಾ ಡೀನ್, ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿ ಶುಭ ಹಾರೈಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News