ಎ.7: ಕೊಣಾಲು ಕಿರುಸೇತುವೆ ಉದ್ಘಾಟನೆ

Update: 2021-04-06 15:15 GMT

ಮಂಗಳೂರು, ಎ.6: ಗೋಳಿತೊಟ್ಟು ಗ್ರಾಪಂ ಮತ್ತು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕಡಬ ತಾಲೂಕಿನ ಗೋಳಿತೊಟ್ಟು ಗ್ರಾಪಂ ವ್ಯಾಪ್ತಿಯ ಕಡಂಬಿಳತ್ತಾಯ ಗುಡ್ಡ ಎಂಬಲ್ಲಿ ಕಿರು ಸೇತುವೆಯ ಉದ್ಘಾಟನಾ ಕಾರ್ಯಕ್ರಮವು ಎ.7ರಂದು ಪೂ.11:45ಕ್ಕೆ ನಡೆಯಲಿದೆ.

ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಿರುಸೇತುವೆ ಉದ್ಘಾಟಿಸಲಿದ್ದಾರೆ. ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಮತ್ತಿತರರು ಉಪಸ್ಥಿತರಿರುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News