ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ

Update: 2021-04-06 16:55 GMT

ಮಂಗಳೂರು, ಎ.6: ಛತ್ತೀಸ್‌ಗಢದಲ್ಲಿ ನಡೆದ ನಕ್ಸಲರ ದಾಳಿಗೆ ಹುತಾತ್ಮರಾದ ಯೋಧರಿಗೆ ದ.ಕ. ಜಿಲ್ಲಾ ಎನ್‌ಎಸ್‌ಯುಐ ವತಿಯಿಂದ ಮುಂಬತ್ತಿ ಹಚ್ಚಿ ಮಂಗಳವಾರ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದ ಎದುರು ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಯೋಧರಿಗೆ ನುಡಿನಮನ ಸಲ್ಲಿಸಿ ಬಳಿಕ ಮಾತನಾಡಿದ ಎನ್‌ಎಸ್‌ಯುಐ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಯೋಧರ ಮೇಲಿನ ನಕ್ಸಲ ದಾಳಿಯನ್ನು ಖಂಡಿಸಿದರು. ಗುಪ್ತಚರ ಇಲಾಖೆಯ ವೈಫಲ್ಯವೇ ಇದಕ್ಕೆ ಮುಖ್ಯ ಕಾರಣವಾಗಿದೆ. ಸರಕಾರ ಈ ಬಗ್ಗೆ ಮಹತ್ವದ ಸಭೆ ನಡೆಸಿ ತನಿಖೆ ಕೈಗೊಳ್ಳ ಬೇಕು ಹಾಗೂ ಯೋಧರಿಗೆ ಉನ್ನತ ಮಟ್ಟದ ಭದ್ರತೆ ಶಸ್ತ್ರಾಸ್ತಗಳನ್ನು ಪೂರೈಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭ ಶೌನಕ್ ರೈ, ಶೋನ್, ನಝೀಬ್ ಮಂಚಿ, ಹಸನ್, ಪವನ್, ಸಿದ್ಧಾರ್ಥ್, ನವೀದ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News