ಎಪ್ರಿಲ್ 8ರಿಂದ ರಾಜ್ಯದಲ್ಲಿ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಪ್ರವಾಸ

Update: 2021-04-07 13:19 GMT

ಬೆಂಗಳೂರು, ಎ.7: ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಉಸ್ತುವಾರಿಯಾದ ಅರುಣ್ ಸಿಂಗ್ ಎಪ್ರಿಲ್ 8ರಿಂದ 11ರವರೆಗೆ ರಾಜ್ಯದಲ್ಲಿ ಪ್ರವಾಸ ಮಾಡಿ, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.

ಎ.8ರಂದು ಮಧ್ಯಾಹ್ನ 1.30ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು ಬಳಿಕ ಅಲ್ಲಿಂದ ಮಂಗಳೂರಿಗೆ ತೆರಳುವರು. ಬಳಿಕ ರಾತ್ರಿ ಪುತ್ತೂರಿನ ಕುಂಜಾಡಿಯಲ್ಲಿ ಪೂರ್ವ ನಿಗದಿತ ಕಾರ್ಯಕ್ರಮದಲ್ಲಿ ಭಾಗವಹಿಸುವರು. ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಇರಲಿದ್ದಾರೆ.

ಎ.9ರಂದು ಬೆಳಗಾವಿಯಲ್ಲಿ, 10ರಂದು ಮಸ್ಕಿಯಲ್ಲಿ ಹಾಗೂ 11ರಂದು ಬಸವಕಲ್ಯಾಣದಲ್ಲಿ ಚುನಾವಣಾ ಪ್ರಚಾರ ಸಭೆಗಳಲ್ಲಿ ಅವರು ಭಾಗವಹಿಸುವರು. 11ರಂದು ಸಂಜೆ ಅವರು ಹೈದರಾಬಾದ್ ವಿಮಾನನಿಲ್ದಾಣದಿಂದ ದಿಲ್ಲಿಗೆ ತೆರಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News