ಬಸ್ ನಿಲ್ದಾಣದಲ್ಲಿ ಯುವಕ ಆತ್ಮಹತ್ಯೆ
Update: 2021-04-08 17:06 GMT
ಹೆಬ್ರಿ, ಎ.8: ಹೆಬ್ರಿಯಲ್ಲಿರುವ ಕೋಳಿ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ಚಾರಾ ಗ್ರಾಮದ ಗಾಂಧಿನಗರ ನಿವಾಸಿ ಪ್ರಶಾಂತ್ ಸೇರಿಗಾರ(29) ಎಂಬವರು ಸಾಲ ತೀರಿಸಲಾಗದೆ ಮಾನಸಿಕವಾಗಿ ನೊಂದು ಎ.8ರಂದು ಮನೆ ಸಮೀಪದ ಬಸ್ ನಿಲ್ದಾಣದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಬಗ್ಗೆ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.