ಬಂಗಾಳದ ಜನತೆ ತನ್ನ ವಿರುದ್ಧ ತಿರುಗಿ ಬಿದ್ದಿದ್ದೇಕೆಂದು ಮಮತಾ ಆತ್ಮಾವಲೋಕನ ಮಾಡಿಕೊಳ್ಳಲಿ: ಅಮಿತ್ ಶಾ

Update: 2021-04-09 07:37 GMT

ಕೋಲ್ಕತಾ: ಕಳೆದ 10 ವರ್ಷಗಳಲ್ಲಿ ಕಳಪೆ ಆಡಳಿತವನ್ನು ನೀಡಿದ್ದರಿಂದ ಬಂಗಾಳದ ಜನರು ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ದ ನಿಂತಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಕೋಲ್ಕತಾದಲ್ಲಿ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಮಾತನಾಡಿದ ಶಾ, ಈಗ  ನಡೆಯುತ್ತಿರುವ ಪಶ್ಚಿಮಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಟಿಎಂಸಿ ಸೋಲು ಖಚಿತ ಎಂದು ಹೇಳಿದ್ದಾರೆ.

ಬಂಗಾಳದ  ಜನರು ತನ್ನ ವಿರುದ್ದ ಏಕೆ ಇದ್ದಾರೆ ಎನ್ನುವುದನ್ನು ದೀದಿ(ಮಮತಾ ಬ್ಯಾನರ್ಜಿ)ಆತ್ಮಾವಲೋಕನ ಮಾಡಿಕೊಳ್ಳಬೇಕು. ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಭ್ರಷ್ಟಾಚಾರ ಉತ್ತುಂಗದಲ್ಲಿದೆ. ಜನತೆ 10 ವರ್ಷಗಳ ಆಡಳಿತದಿಂದ ಬೇಸರಗೊಂಡಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News