ಯುಗಾದಿ ಹಬ್ಬಕ್ಕೆ ಹೊಸ ಬಟ್ಟೆ ಖರೀದಿಸಿಲ್ಲವೆಂದು ಬಾಲಕಿ ಆತ್ಮಹತ್ಯೆ

Update: 2021-04-09 14:50 GMT

ಕೊಳ್ಳೇಗಾಲ, ಎ.9: ಯುಗಾದಿ ಹಬ್ಬಕ್ಕೆ ಹೊಸ ಬಟ್ಟೆ ತೆಗೆದುಕೊಟ್ಟಿಲ್ಲವೆಂದು ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದಲ್ಲಿ ಶುಕ್ರವಾರ ನಡೆದಿದೆ.

ಪಟ್ಟಣದ ಬಸ್ತೀಪುರ ಬಡಾವಣೆಯ ರಸ್ತೆ ನಾಯ್ಡು ತೋಟದ ಸಮೀಪ ನಿವಾಸಿ ಬಸವರಾಜು ಎಂಬವರ ಮಗಳಾದ ವಿದ್ಯಾರ್ಥಿನಿ ಹರ್ಷಿತಾ(12) ಮೃತ ಬಾಲಕಿ.

ಹಬ್ಬಕ್ಕೆ ಹೊಸ ಬಟ್ಟೆ ತೆಗೆದುಕೊಡಿ ಎಂದು ಹರ್ಷಿತಾ ಕೇಳಿದಾಗ ಆಕೆಯ ಪೋಷಕರು, ಸಂಬಳವಾದ ಬಳಿಕ ಎಲ್ಲರೂ ಸೇರಿ ಬಟ್ಟೆ ತೆಗೆದುಕೊಳ್ಳೋಣ ಎಂದು ಹೇಳಿದ್ದಾರೆ. ಇದರಿಂದ ಬೇಸರಗೊಂಡ ಹರ್ಷಿತಾ ಮನೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.

ಈ ಸಂಬಂಧ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ಸರಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಬಳಿಕ ವಾರಸುದಾರರಿಗೆ ಒಪ್ಪಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News