ಸಾರಿಗೆ ನೌಕರರ ಮುಷ್ಕರಕ್ಕೆ ಕಾಂಗ್ರೆಸ್‍ನಿಂದ ಸಂಪೂರ್ಣ ಬೆಂಬಲ: ಡಿ.ಕೆ.ಶಿವಕುಮಾರ್

Update: 2021-04-09 16:30 GMT

ಕಲಬುರಗಿ, ಎ.9: ತಮ್ಮ ಹಕ್ಕುಗಳ ಈಡೇರಿಕೆಗಾಗಿ ಸಾರಿಗೆ ನೌಕರರು ರಾಜ್ಯಾದ್ಯಂತ ನಡೆಸುತ್ತಿರುವ ಮುಷ್ಕರವನ್ನು ಕಾಂಗ್ರೆಸ್ ಸಂಪೂರ್ಣವಾಗಿ ಬೆಂಬಲಿಸಲಿದೆ ಎಂದು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಮಾತ್ರ ದೇಶಾದ್ಯಂತ ಕಾರ್ಮಿಕರು ಸಾಕಷ್ಟು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದನ್ನು ಬಗೆಹರಿಸುವಲ್ಲಿ ಬಿಜೆಪಿ ಹಿಂದೇಟು ಹಾಕುತ್ತಿರುವುದು ಸರಿಯಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಾರಿಗೆ ನೌಕರರು ಅನುಭವಿಸುತ್ತಿರುವ ಯಾತನೆಯನ್ನು ರಾಜ್ಯ ಸರಕಾರ ಕೇಳಬೇಕು. ಕಾರ್ಮಿಕರನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ಆದ್ಯತೆ ಮೇರೆಗೆ ಅವರ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಗಮನ ಕೊಡಬೇಕೆಂದು ಅವರು ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News