ಪಡುಬಿದ್ರೆ: ಉಚ್ಚಿಲ ಪೇಟೆಯಲ್ಲಿ ಬೈಕಿಗೆ ಟೆಂಪೊ ಢಿಕ್ಕಿ: ಬೈಕ್ ಸವಾರ ಮೃತ್ಯು
Update: 2021-04-10 04:28 GMT
ಪಡುಬಿದ್ರೆ, ಎ.10: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲ ಪೇಟೆಯಲ್ಲಿ ಶನಿವಾರ ಬೆಳಗ್ಗೆ ಸಂಭವಿಸಿದ ವಾಹನ ಅಪಘಾತದಲ್ಲಿ ಬೈಕ್ ಸವಾರರೋರ್ವ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಹೆಜಮಾಡಿಯ ಎನ್.ಎಸ್.ರೋಡ್ ನ ನಿವಾಸಿ ಶಿಯಾಲಿ ಹಾಜಿ ಕನ್ನಂಗಾರ್ ಎಂಬವರ ಪುತ್ರ ಮುಹಮ್ಮದ್ ಅಲಿ (50) ಮೃತಪಟ್ಟವರು.
ಅವರು ಇಂದು ಬೆಳಗ್ಗೆ ಬೈಕಿನಲ್ಲಿ ಸಂಚರಿಸುತ್ತಿದ್ದ ವೇಳೆ ಟೆಂಪೋ ಢಿಕ್ಕಿ ಹೊಡೆದಿದೆಯೆನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡಿದ್ದ ಮುಹಮ್ಮದ್ ಅಲಿಯವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.
ಪಿಡಬ್ಲ್ಯುಡಿ ಕಾಂಟ್ರಾಕ್ಟರ್ ಆಗಿದ್ದ ಮೃತರು ಪತ್ನಿ, ಓರ್ವ ಪುತ್ರ, ಓರ್ವೆ ಪುತ್ರಿ ಸಹಿತ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಅಪಘಾತದ ಬಗ್ಗೆ ಪಡುಬಿದ್ರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.