ಅಬ್ದುಲ್ಲತೀಫ್ ಮಡಿಕೇರಿ

Update: 2021-04-10 09:51 GMT

ಮಡಿಕೇರಿ, ಎ.10: ಅನಿವಾಸಿ ಭಾರತೀಯರ ವೇದಿಕೆಯಾದ ಖತರ್ ಇಂಡಿಯನ್ ಸೋಶಿಯಲ್ ಫೋರಂ (QISF) ಕಾರ್ಯದರ್ಶಿ, ಅಬ್ದುಲ್ಲತೀಫ್ ಮಡಿಕೇರಿ ಶನಿವಾರ ಮುಂಜಾನೆ ನಿಧನರಾಗಿದ್ದಾರೆ.

ಕಳೆದ 30 ವರ್ಷಗಳಿಂದ ಖತರ್ ನ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಅಬ್ದುಲ್ಲತೀಫ್ ಮಡಿಕೇರಿಯವರು ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದರು. ಅನಿವಾಸಿ ಭಾರತೀಯರ ಸಮಸ್ಯೆಗಳಿಗೆ ಸದಾ ಸ್ಪಂದಿಸುತ್ತಿದ್ದರು.

ಮೃತರು ಪತ್ನಿ, ಮೂವರು ಪುತ್ರರು, ಓರ್ವ ಪುತ್ರಿ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.

ಸಂತಾಪ: ಅಬ್ದುಲ್ಲತೀಫ್ ಮಡಿಕೇರಿ ನಿಧನಕ್ಕೆ ಖತರ್ ಇಂಡಿಯನ್ ಸೋಶಿಯಲ್ ಫೋರಂ ತೀವ್ರ ಸಂತಾಪ ವ್ಯಕ್ತಪಡಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ