ಮಂಗಳೂರು: ಕುತ್ತಿಗೆಗೆ ಶಾಲು ಸಿಲುಕಿ ಬಾಲಕಿ ಮೃತ್ಯು; ದೂರು

Update: 2021-04-12 06:47 GMT

ಉಳ್ಳಾಲ : ಕುತ್ತಿಗೆಗೆ ಶಾಲು ಸಿಲುಕಿ ಬಾಲಕಿಯೋರ್ವಳು ಮೃತಪಟ್ಟ ಘಟನೆ ಕೋಟೆಕಾರು ಎಂಬಲ್ಲಿ ರವಿವಾರ ನಡೆದಿದೆ.

ಕಾಸರಗೋಡು ಎಡನೀರು ನಿವಾಸಿ ಕೃಷ್ಣ ನಾಯ್ಕ್ ಎಂಬವರ ಪುತ್ರಿ ಮೇಘಶ್ರೀ (13) ಮೃತ ಬಾಲಕಿ.

8ನೇ ತರಗತಿಯ ವಿದ್ಯಾರ್ಥಿನಿಯಾಗಿದ್ದ ಈಕೆ ಕೋಟೆಕಾರಿನ ಸಂಬಂಧಿಕರ ಮನೆಯಲ್ಲಿ ಇದ್ದು, ಕುತ್ತಿಗೆಗೆ ಶಾಲು ಸಿಲುಕಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.  ಸಾವಿನಲ್ಲಿ ಸಂಶಯ ವ್ಯಕ್ತವಾದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಉಳ್ಳಾಲ ಠಾಣೆ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News