ಕಟಪಾಡಿ: ಸಂಶಯಾಸ್ಪದ ರೀತಿಯಲ್ಲಿ ಯುವಕ ಮೃತ್ಯು

Update: 2021-04-12 16:11 GMT

ಕಾಪು, ಎ.12: ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ಯುವಕನ ಮೃತದೇಹ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಇಂದು ಪತ್ತೆಯಾಗಿದ್ದು, ಈ ಬಗ್ಗೆ ಮನೆ ಯವರು ಮೃತರ ಮರಣದಲ್ಲಿ ಸಂಶಯ ವ್ಯಕ್ತಪಡಿಸಿ ನೀಡಿರುವ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 ಮೃತರನ್ನು ಕಟಪಾಡಿ ಮಟ್ಟು ವಿಷ್ಣುಮೂರ್ತಿ ದೇವಸ್ಥಾನದ ಹತ್ತಿರ ನಿವಾಸಿ ಭೋಜ ಎಂಬವರ ಮಗ ಸಂದೀಪ್(30) ಎಂದು ಗುರುತಿಸಲಾಗಿದೆ. ಮಣಿಪಾಲ ಪ್ರೆಸ್‌ನಲ್ಲಿ ಕೆಲಸ ಮಾಡಿಕೊಂಡಿದ್ದ ಇವರು, ಎ.4ರಂದು ಸಂಜೆ ಸಂಬಂಧಿಕರ ಜೊತೆ ಉಡುಪಿಗೆ ಸಿನಿಮಾ ನೋಡಲು ಹೋಗಿದ್ದು ನಂತರ ಸಂದೀಪ್ ಸಿನೆಮಾ ನೋಡದೆ ವಾಪಾಸ್ಸು ಮನೆಗೆ ಹೋಗುವುದಾಗಿ ಹೇಳಿ ಹೋದವರು ನಾಪತ್ತೆಯಾಗಿದ್ದರು.

ಈ ಬಗ್ಗೆ ಎ.7ರಂದು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಎ.12ರಂದು ಮಧ್ಯಾಹ್ನ 1:15ರ ಸುಮಾರಿಗೆ ಮೂಡಬೆಟ್ಟು ಗ್ರಾಮದ ಸಿಮೆಂಟ್ ಗೋದಾಮಿನ ಹತ್ತಿರ ಹಾಡಿಯಲ್ಲಿ ಕುತ್ತಿಗೆಗೆ ಬೆಲ್ಟ್ ಕಟ್ಟಿಕೊಂಡು ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಸಂದೀಪ್ ಮೃತದೇಹ ಪತ್ತೆಯಾಗಿದೆ. ಅವಿವಾಹಿತರಾಗಿರುವ ಸಂದೀಪ್ ಕುಡಿತದ ಅಭ್ಯಾಸ ಹೊಂದಿದ್ದರು. ಇವರ ಮರಣದಲ್ಲಿ ಸಂಶಯ ಇದೆ ಎಂದು ಮೃತರ ಸಹೆದಗ ಸಚಿನ್ ದೂರಿನಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News