ಹಿರಿಯ ರಂಗಕರ್ಮಿ ಎಲ್.ಬಿ.ಕೆ ಆಲ್ದಾಳ ನಿಧನ

Update: 2021-04-13 06:18 GMT

ಕಲಬುರಗಿ : ಕನ್ನಡದ ಹಿರಿಯ ನಾಟಕಕಾರ, ಗುಬ್ಬಿ ವೀರಣ್ಣ ರಂಗ ಪ್ರಶಸ್ತಿ ಪಡೆದ ಹೈದರಾಬಾದ್ ಕರ್ನಾಟಕದ ಏಕೈಕ ರಂಗಕರ್ಮಿ ಎಲ್.ಬಿ.ಕೆ.ಆಲ್ದಾಳ ಅವರು ಸೋಮವಾರ ರಾತ್ರಿ ನಿಧನರಾಗಿದ್ದಾರೆ.

ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಶಹಾಪುರ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಸೇರ್ಪಡೆಯಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ. ಅವರಿಗೆ ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ಎರಡು ವರ್ಷದ ಹಿಂದೆ ಅವರ ಪತ್ನಿ ನಿಧನರಾಗಿದ್ದಾರೆ. 

2013 ರಲ್ಲಿ ಹಿರಿಯ ಕವಿ ಆಲ್ದಾಳ ಅವರನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಸಮ್ಮೇಳನದ ಅಧ್ಯಕ್ಷರನ್ನಾಗಿ ಮಾಡಲಾಗಿತ್ತು. 2002ರಲ್ಲಿ ತತ್ವ ಪದಕಾರರ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿದ್ದರು. ಜೇವರಗಿ ತಾಲೂಕಿನ ಎರಡನೇ ಸಾಹಿತ್ಯ ಸಮ್ಮೇಳನ ಅಧ್ಯಕ್ಷ, ಕಲಬುರ್ಗಿ ಜಿಲ್ಲಾ 13ನೇ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News