ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ: ಸಿಎಂ ಯಡಿಯೂರಪ್ಪ

Update: 2021-04-13 08:52 GMT

ಬೆಂಗಳೂರು, ಎ.13: ಕೋವಿಡ್ ಸಂಬಂಧಿಸಿದಂತೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಕೂಡ ಕರೆ ಮಾಡಿ ಮಾತನಾಡಿದ್ದಾರೆ. ವಿಪಕ್ಷದವರ ಜೊತೆ ಸಭೆ ಮಾಡಿ, ಅವರ ಸಲಹೆಯನ್ನೂ ಪಡೆಯುತ್ತೇವೆ. ಅಧಿಕಾರಿಗಳ ಜೊತೆ ಸಮಾಲೋಚನೆ ಮಾಡುತ್ತೇವೆ. ಇನ್ನು ಜನ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಎರಡು ವಿಧಾನಸಭೆ ಚುನಾವಣಾ ಪ್ರಚಾರ ಮುಗಿಸಿ ಬಂದಿದ್ದೇನೆ. ನಾಳೆ ಬೆಳಗಾವಿ, ಗೋಕಾಕ್​ಗೆ ತೆರಳುತ್ತೇನೆ. ಮೂರು ಕ್ಷೇತ್ರಗಳ ಉಪಚುನಾವಣೆ ಗೆಲ್ಲುವ ಭರವಸೆ ಇದೆ. ಇಪ್ಪತ್ತು ಸಾವಿರ ಅಂತರದಿಂದ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬಸವಕಲ್ಯಾಣದಲ್ಲಿ ಜಾತಿವಾರು ಸಭೆ ಮಾಡುತ್ತಿರೋ ಆರೋಪ ವಿಚಾರ ಕುರಿತು ಪ್ರತಿಕ್ರಿಯಿಸಿ, ಆ ರೀತಿ ಏನನ್ನೂ ಮಾಡಿಲ್ಲ. ಡಿ.ಕೆ.ಶಿವಕುಮಾರ್ ಅವರ ಬಗ್ಗೆ ವಿಶ್ವಾಸವಿದೆ. ನಮ್ಮ ಬಗ್ಗೆ ಮಾತನಾಡದಿದ್ದರೆ ಅವರಿಗೆ ಸಮಾಧಾನ ಇಲ್ಲ. ಹಾಗಾಗಿ ಮಾತನಾಡುತ್ತಾರೆ ಅಷ್ಟೇ ಎಂದು ನುಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News